<p>2026ರ ಟಿ20 ವಿಶ್ವಕಪ್ನ ಬಾಂಗ್ಲಾದೇಶದ ಲೀಗ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಐಸಿಸಿಗೆ ಮನವಿ ಮಾಡಿದೆ. </p><p>ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶವು ಭಾರತದಲ್ಲಿ 4 ಲೀಗ್ ಪಂದ್ಯಗಳನ್ನು ಆಡಲಿದೆ. ಅದರಲ್ಲಿ 3 ಪಂದ್ಯಗಳು ಕೋಲ್ಕತ್ತಾ ಹಾಗೂ ಒಂದು ಪಂದ್ಯವು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಇದೀಗ ಆ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಐಸಿಸಿಗೆ ಮನವಿ ಮಾಡಲಾಗಿದೆ ಎಂದು ಬಿಸಿಬಿ ಅಧ್ಯಕ್ಷ ಆಸಿಫ್ ನಜ್ರುಲ್ ಹೇಳಿದ್ದಾರೆ. </p>.ಬಿಸಿಸಿಐ ಸೂಚನೆ: ಬಾಂಗ್ಲಾ ವೇಗಿ ಮುಸ್ತಫಿಝರ್ ಕೈಬಿಟ್ಟ ಕೊಲ್ಕತ್ತ ನೈಟ್ ರೈಡರ್ಸ್.<p>2026ರ ಐಪಿಎಲ್ ಮಿನಿ ಹರಾಜಿನಲ್ಲಿ ಕೆಕೆಆರ್ ತಂಡವು ಪೈಪೋಟಿಯ ನಡುವೆ ₹9.20 ಕೋಟಿ ಮೊತ್ತಕ್ಕೆ (ಮೂಲಬೆಲೆ ₹2 ಕೋಟಿ) ಮುಸ್ತಫಿಝುರ್ ಅವರನ್ನು ತನ್ನ ಖರೀದಿಸಿತ್ತು. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಇದೀಗ ಬಿಸಿಸಿಐ ಸೂಚನೆ ಮೇರೆಗೆ ತಂಡದಿಂದ ಮುಸ್ತಫಿಝುರ್ ಅವರನ್ನು ಕೈಬಿಡಲಾಗಿದೆ. ಅದರ ನಂತರ, ಬಿಸಿಬಿ ಈ ಮನವಿ ಮಾಡಿದೆ. </p>.<p><strong>ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರ ಸ್ಥಗಿತ ?</strong></p><p>‘ಬಾಂಗ್ಲಾದೇಶದಲ್ಲಿ 2026ರ ಐಪಿಎಲ್ ಪ್ರಸಾರವನ್ನು ಸ್ಥಗಿತಗೊಳಿಸುವಂತೆ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಮನವಿ ಮಾಡಲಾಗಿದ್ದು, ಬಾಂಗ್ಲಾದೇಶದ ಕ್ರಿಕೆಟ್, ಕ್ರಿಕೆಟಿಗರು ಅಥವಾ ಬಾಂಗ್ಲಾದೇಶಕ್ಕಾಗುವ ಅವಮಾನವನ್ನು ನಾವು ಸಹಿಸುವುದಿಲ್ಲ’ ಎಂದು ಆಸಿಫ್ ನಜ್ರುಲ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>2026ರ ಟಿ20 ವಿಶ್ವಕಪ್ನ ಬಾಂಗ್ಲಾದೇಶದ ಲೀಗ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಐಸಿಸಿಗೆ ಮನವಿ ಮಾಡಿದೆ. </p><p>ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶವು ಭಾರತದಲ್ಲಿ 4 ಲೀಗ್ ಪಂದ್ಯಗಳನ್ನು ಆಡಲಿದೆ. ಅದರಲ್ಲಿ 3 ಪಂದ್ಯಗಳು ಕೋಲ್ಕತ್ತಾ ಹಾಗೂ ಒಂದು ಪಂದ್ಯವು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಇದೀಗ ಆ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಐಸಿಸಿಗೆ ಮನವಿ ಮಾಡಲಾಗಿದೆ ಎಂದು ಬಿಸಿಬಿ ಅಧ್ಯಕ್ಷ ಆಸಿಫ್ ನಜ್ರುಲ್ ಹೇಳಿದ್ದಾರೆ. </p>.ಬಿಸಿಸಿಐ ಸೂಚನೆ: ಬಾಂಗ್ಲಾ ವೇಗಿ ಮುಸ್ತಫಿಝರ್ ಕೈಬಿಟ್ಟ ಕೊಲ್ಕತ್ತ ನೈಟ್ ರೈಡರ್ಸ್.<p>2026ರ ಐಪಿಎಲ್ ಮಿನಿ ಹರಾಜಿನಲ್ಲಿ ಕೆಕೆಆರ್ ತಂಡವು ಪೈಪೋಟಿಯ ನಡುವೆ ₹9.20 ಕೋಟಿ ಮೊತ್ತಕ್ಕೆ (ಮೂಲಬೆಲೆ ₹2 ಕೋಟಿ) ಮುಸ್ತಫಿಝುರ್ ಅವರನ್ನು ತನ್ನ ಖರೀದಿಸಿತ್ತು. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಇದೀಗ ಬಿಸಿಸಿಐ ಸೂಚನೆ ಮೇರೆಗೆ ತಂಡದಿಂದ ಮುಸ್ತಫಿಝುರ್ ಅವರನ್ನು ಕೈಬಿಡಲಾಗಿದೆ. ಅದರ ನಂತರ, ಬಿಸಿಬಿ ಈ ಮನವಿ ಮಾಡಿದೆ. </p>.<p><strong>ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರ ಸ್ಥಗಿತ ?</strong></p><p>‘ಬಾಂಗ್ಲಾದೇಶದಲ್ಲಿ 2026ರ ಐಪಿಎಲ್ ಪ್ರಸಾರವನ್ನು ಸ್ಥಗಿತಗೊಳಿಸುವಂತೆ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಮನವಿ ಮಾಡಲಾಗಿದ್ದು, ಬಾಂಗ್ಲಾದೇಶದ ಕ್ರಿಕೆಟ್, ಕ್ರಿಕೆಟಿಗರು ಅಥವಾ ಬಾಂಗ್ಲಾದೇಶಕ್ಕಾಗುವ ಅವಮಾನವನ್ನು ನಾವು ಸಹಿಸುವುದಿಲ್ಲ’ ಎಂದು ಆಸಿಫ್ ನಜ್ರುಲ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>