<p><strong>ಮುಂಬೈ:</strong> ಟಿ20 ವಿಶ್ವಕಪ್ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಭಾರತ ಸೇರಿದಂತೆ ಎಲ್ಲಾ ತಂಡಗಳು ಪ್ರತಿಷ್ಠಿತ ಟೂರ್ನಿಗಾಗಿ ಕಠಿಣ ಅಭ್ಯಾಸ ನಡೆಸುತ್ತಿವೆ. ಈ ನಡುವೆ ಭಾರತ ತಂಡದ ತಾರಾ ವೇಗಿ ಹರ್ಷಿತ್ ರಾಣಾ ಗಾಯಗೊಂಡಿದ್ದು, ಟೂರ್ನಿಯಿಂದಲೇ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.</p><p>ಬುಧವಾರ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು.</p><p>ಹರ್ಷಿತ್, ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ 1 ಓವರ್ ಬೌಲಿಂಗ್ ಮಾಡಿ 16 ರನ್ ಬಿಟ್ಟುಕೊಟ್ಟಿದ್ದರು. ಅದೇ ವೇಳೆ ಅವರು ಮೊಣಕಾಲಿನ ಗಾಯಕ್ಕೆ ಒಳಗಾಗಿ, ಕುಂಟುತ್ತಾ ಮೈದಾನದಿಂದ ಹೊರನಡೆದಿದ್ದರು. </p><p>ವಿಶ್ವಕಪ್ಗೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಹರ್ಷಿತ್ ರಾಣಾ ಗಾಯದ ಕುರಿತು ಮಾತನಾಡಿದ್ದಾರೆ. ‘ಹರ್ಷಿತ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಅನಿಸುತ್ತಿಲ್ಲ’ ಎಂದರು.</p><p>‘ಹರ್ಷಿತ್ ರಾಣಾ ಅವರನ್ನು ಇನ್ನೂ ತಂಡದಿಂದ ಹೊರಗಿಡಲಾಗಿಲ್ಲ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಆದರೆ, ಹರ್ಷಿತ್ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಅನಿಸುತ್ತಿಲ್ಲ’ ಎಂಬುದನ್ನು ಒಪ್ಪಿಕೊಂಡರು.</p><p>ಸೂರ್ಯಕುಮಾರ್ ಯಾದವ್ ಅವರು ಹರ್ಷಿತ್ ರಾಣಾ ಪಂದ್ಯಾವಳಿಯಿಂದ ಹೊರಗುಳಿಯುವ ಕುರಿತು ನೇರವಾಗಿ ತಿಳಿಸಿಲ್ಲ. ಆದರೆ, ಅವರು ಟಿ20 ವಿಶ್ವಕಪ್ ಪಂದ್ಯಾವಳಿಯ ಯಾವುದೇ ಹಂತದಲ್ಲೂ ಚೇತರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಟಿ20 ವಿಶ್ವಕಪ್ ಆರಂಭಕ್ಕೆ ಇನ್ನೊಂದೇ ದಿನ ಬಾಕಿ ಉಳಿದಿದೆ. ಭಾರತ ಸೇರಿದಂತೆ ಎಲ್ಲಾ ತಂಡಗಳು ಪ್ರತಿಷ್ಠಿತ ಟೂರ್ನಿಗಾಗಿ ಕಠಿಣ ಅಭ್ಯಾಸ ನಡೆಸುತ್ತಿವೆ. ಈ ನಡುವೆ ಭಾರತ ತಂಡದ ತಾರಾ ವೇಗಿ ಹರ್ಷಿತ್ ರಾಣಾ ಗಾಯಗೊಂಡಿದ್ದು, ಟೂರ್ನಿಯಿಂದಲೇ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.</p><p>ಬುಧವಾರ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು.</p><p>ಹರ್ಷಿತ್, ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ 1 ಓವರ್ ಬೌಲಿಂಗ್ ಮಾಡಿ 16 ರನ್ ಬಿಟ್ಟುಕೊಟ್ಟಿದ್ದರು. ಅದೇ ವೇಳೆ ಅವರು ಮೊಣಕಾಲಿನ ಗಾಯಕ್ಕೆ ಒಳಗಾಗಿ, ಕುಂಟುತ್ತಾ ಮೈದಾನದಿಂದ ಹೊರನಡೆದಿದ್ದರು. </p><p>ವಿಶ್ವಕಪ್ಗೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, ಹರ್ಷಿತ್ ರಾಣಾ ಗಾಯದ ಕುರಿತು ಮಾತನಾಡಿದ್ದಾರೆ. ‘ಹರ್ಷಿತ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಅನಿಸುತ್ತಿಲ್ಲ’ ಎಂದರು.</p><p>‘ಹರ್ಷಿತ್ ರಾಣಾ ಅವರನ್ನು ಇನ್ನೂ ತಂಡದಿಂದ ಹೊರಗಿಡಲಾಗಿಲ್ಲ. ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಆದರೆ, ಹರ್ಷಿತ್ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಅನಿಸುತ್ತಿಲ್ಲ’ ಎಂಬುದನ್ನು ಒಪ್ಪಿಕೊಂಡರು.</p><p>ಸೂರ್ಯಕುಮಾರ್ ಯಾದವ್ ಅವರು ಹರ್ಷಿತ್ ರಾಣಾ ಪಂದ್ಯಾವಳಿಯಿಂದ ಹೊರಗುಳಿಯುವ ಕುರಿತು ನೇರವಾಗಿ ತಿಳಿಸಿಲ್ಲ. ಆದರೆ, ಅವರು ಟಿ20 ವಿಶ್ವಕಪ್ ಪಂದ್ಯಾವಳಿಯ ಯಾವುದೇ ಹಂತದಲ್ಲೂ ಚೇತರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>