ಬುಧವಾರ, ಮಾರ್ಚ್ 29, 2023
30 °C

T20 WC: ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದ ಭಾರತ; ಟ್ರೋಲ್ ಸುರಿಮಳೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್‌ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ. 

ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು. 

ಇದನ್ನೂ ಓದಿ: 

ಹಾಗಾಗಿ ಸೋಮವಾರ ನಮೀಬಿಯಾ ವಿರುದ್ಧ ನಡೆಯಲಿರುವ ಪಂದ್ಯವು ವಿರಾಟ್ ಕಪ್ತಾನಗರಿಯಲ್ಲಿ ಭಾರತದ ಪಾಲಿಗೆ ಕೊನೆಯ ಪಂದ್ಯವಾಗಿದೆ. 

ಏತನ್ಮಧ್ಯೆ ಅಫ್ಗನ್ ವಿರುದ್ಧ ನ್ಯೂಜಿಲೆಂಡ್ ಜಯ ಗಳಿಸಿದ್ದಂತೆ ಟೀಮ್ ಇಂಡಿಯಾ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳ ಅಭಿಷೇಕವಾಗುತ್ತಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು