ಈ ಕುರಿತು 'ಟೈಮ್ಸ್ ಆಫ್ ಇಂಡಿಯಾ' ಅಂಕಣದಲ್ಲಿ ಪ್ರತಿಕ್ರಿಯಿಸಿರುವ ಗಂಭೀರ್, 'ಪಾಕಿಸ್ತಾನ ವಿರುದ್ಧ ಭಾರತ ಸೋಲು ಅನುಭವಿಸಿದೆ. ಅದಾದ ನಂತರ ತಂಡದ ಹಾಗೂ ದೇಶದ ಮೇಲಿನ ಶಮಿ ನಿಯತ್ತನ್ನು ಪ್ರಶ್ನಿಸಲಾಗಿದೆ. ಎಷ್ಟು ಅಪಹಾಸ್ಯಕರ? ಒಂದು ನಿರ್ದಿಷ್ಟ ಧರ್ಮಕ್ಕೆ ಸೇರಿದ ಕಾರಣಕ್ಕೆ ಜಸ್ಪ್ರೀತ್ ಬೂಮ್ರಾ ಹಾಗೂ ಭುವನೇಶ್ವರ್ ಕುಮಾರ್ ಹೆಚ್ಚು ಬದ್ಧರಾಗಿದ್ದರು ಎಂದು ಹೇಳಬೇಕೇ? ನಾವು ಎತ್ತ ಸಾಗುತ್ತಿದ್ದೇವೆ?' ಎಂದು ಹೇಳಿದ್ದಾರೆ.