ದುಬೈ: 'ರಾವಿಲ್ಪಿಂಡಿ ಎಕ್ಸ್ಪ್ರೆಸ್' ಖ್ಯಾತಿಯ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯಬ್ ಅಖ್ತರ್, ಭಾರತದ ಮಾಜಿ ದಿಗ್ಗಜರಾದ ಕಪಿಲ್ ದೇವ್ ಹಾಗೂ ಸುನಿಲ್ ಗವಾಸ್ಕರ್ ಅವರನ್ನು ಭೇಟಿಯಾಗಿದ್ದಾರೆ.
ಐಸಿಸಿ ಟ್ವೆಂಟಿ-20 ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯಕ್ಕೆ ಇನ್ನೊಂದು ವಾರ ಮಾತ್ರ ಬಾಕಿ ಉಳಿದಿರುವಂತೆಯೇ ಈ ಭೇಟಿ ನಡೆದಿದೆ.
ಈ ಕುರಿತು ಸ್ವತ: ಶೋಯಬ್ ಅಖ್ತರ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಕ್ರಿಕೆಟ್ನ ಅತಿ ದೊಡ್ಡ ಹಣಾಹಣಿಗೂ ಮುನ್ನ ದಿಗ್ಗಜರನ್ನು ಭೇಟಿಯಾಗಿ ಸಮಯ ಕಳೆದಿರುವುದಾಗಿ ಉಲ್ಲೇಖಿಸಿದ್ದಾರೆ.