<p><strong>ಢಾಕಾ:</strong> ಅಂತರರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಪ್ರಕಟಿಸಿ ಅಚ್ಚರಿ ಮೂಡಿಸಿದ್ದ ಬಾಂಗ್ಲಾದೇಶದ ಕ್ರಿಕೆಟಿಗ ತಮೀಮ್ ಇಕ್ಬಾಲ್ ಅವರು, ಒಂದೇ ದಿನದಲ್ಲಿ ತಮ್ಮ ನಿರ್ಧಾರ ವಾಪಸ್ ಪಡೆದಿದ್ದಾರೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಸೂಚನೆ ಇದಕ್ಕೆ ಕಾರಣ.</p><p>‘ತಮೀಮ್ ಅವರು ನಿವೃತ್ತಿ ನಿರ್ಧಾರ ಹಿಂಪಡೆದಿದ್ದಾರೆ. ಪ್ರಧಾನಿ ಶೇಖ್ ಹಸೀನಾ ಅವರ ಭೇಟಿಯ ಬಳಿಕ ತೀರ್ಮಾನ ಬದಲಿಸಿದ್ದಾರೆ’ ಎಂದು ಬಾಂಗ್ಲಾ ದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ನಿರ್ದೇಶಕ ಜಲಾಲ್ ಯೂನುಸ್ ಶುಕ್ರವಾರ ಹೇಳಿದ್ದಾರೆ.</p><p>ತಮೀಮ್ ಅವರು ಢಾಕಾದ ನಿವಾಸದಲ್ಲಿ ಪ್ರಧಾನಿ ಅವರನ್ನು ಭೇಟಿಯಾದರು. ಬಿಸಿಬಿ ಅಧ್ಯಕ್ಷ ನಜ್ಮುಲ್ ಹಸನ್ ಅವರು ಈ ವೇಳೆ ಜತೆಗಿದ್ದರು.</p><p>‘ಪ್ರಧಾನಿ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಯಿತು. ನಿವೃತ್ತಿ ವಾಪಸ್ ಪಡೆದು ಕ್ರಿಕೆಟ್ಗೆ ಮರಳುವಂತೆ ಅವರು ಸೂಚಿಸಿದರು. ನನಗೆ ಇಲ್ಲ ಎನ್ನಲು ಆಗಲಿಲ್ಲ’ ಎಂದು ಪ್ರಧಾನಿ ಭೇಟಿಯ ಬಳಿಕ ತಮೀಮ್ ತಿಳಿಸಿದರು.</p><p>‘ಗಾಯದಿಂದ ಚೇತರಿಸಿಕೊಳ್ಳಲು ತಮೀಮ್, ಆರು ವಾರ ವಿಶ್ರಾಂತಿ ಪಡೆಯಲಿದ್ದಾರೆ. ಸೆಪ್ಟೆಂಬರ್ನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯ ವೇಳೆಗೆ ಅವರು ಪೂರ್ಣ ದೈಹಿಕ ಸಾಮರ್ಥ್ಯ ಹೊಂದುವುದು ಅಗತ್ಯ’ ಎಂದು ನಜ್ಮುಲ್ ಹಸನ್ ಮಾಹಿತಿ ನೀಡಿದರು.</p><p>ಅಫ್ಗಾನಿಸ್ತಾನ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಇನ್ನುಳಿದ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ತಂಡವನ್ನು ಲಿಟನ್ ದಾಸ್ ಮುನ್ನಡೆಸುವರು ಎಂದು ಬಿಸಿಬಿ ಶುಕ್ರವಾರ ಬೆಳಿಗ್ಗೆ ಪ್ರಕಟಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ತಮೀಮ್, ಪ್ರಧಾನಿ ಅವರನ್ನು ಭೇಟಿಯಾಗಿದ್ದಾರೆ.</p><p>ತಮೀಮ್ ಕೈಗೊಂಡ ನಿರ್ಧಾರ ಅಚ್ಚರಿ ಉಂಟು ಮಾಡಿದೆ ಎಂದು ಲಿಟನ್ ಹೇಳಿದ್ದರು. ‘ಅವರಿಂದ ಅಂತಹ ನಿರ್ಧಾರ ಬರಬಹುದು ಎಂದು ಯಾರೂ ಊಹಿಸಿರಲಿಲ್ಲ. ಹಲವು ವರ್ಷಗಳಿಂದ ಅವರು ತಂಡಕ್ಕಾಗಿ ಆಡಿದ್ದಾರೆ. ನಾನು ಹಾಗೂ ಸಹ ಆಟಗಾರರು ಅವರ ನಿರ್ಧಾರವನ್ನು ಗೌರವಿಸುತ್ತೇವೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಅಂತರರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಪ್ರಕಟಿಸಿ ಅಚ್ಚರಿ ಮೂಡಿಸಿದ್ದ ಬಾಂಗ್ಲಾದೇಶದ ಕ್ರಿಕೆಟಿಗ ತಮೀಮ್ ಇಕ್ಬಾಲ್ ಅವರು, ಒಂದೇ ದಿನದಲ್ಲಿ ತಮ್ಮ ನಿರ್ಧಾರ ವಾಪಸ್ ಪಡೆದಿದ್ದಾರೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಸೂಚನೆ ಇದಕ್ಕೆ ಕಾರಣ.</p><p>‘ತಮೀಮ್ ಅವರು ನಿವೃತ್ತಿ ನಿರ್ಧಾರ ಹಿಂಪಡೆದಿದ್ದಾರೆ. ಪ್ರಧಾನಿ ಶೇಖ್ ಹಸೀನಾ ಅವರ ಭೇಟಿಯ ಬಳಿಕ ತೀರ್ಮಾನ ಬದಲಿಸಿದ್ದಾರೆ’ ಎಂದು ಬಾಂಗ್ಲಾ ದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ನಿರ್ದೇಶಕ ಜಲಾಲ್ ಯೂನುಸ್ ಶುಕ್ರವಾರ ಹೇಳಿದ್ದಾರೆ.</p><p>ತಮೀಮ್ ಅವರು ಢಾಕಾದ ನಿವಾಸದಲ್ಲಿ ಪ್ರಧಾನಿ ಅವರನ್ನು ಭೇಟಿಯಾದರು. ಬಿಸಿಬಿ ಅಧ್ಯಕ್ಷ ನಜ್ಮುಲ್ ಹಸನ್ ಅವರು ಈ ವೇಳೆ ಜತೆಗಿದ್ದರು.</p><p>‘ಪ್ರಧಾನಿ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಯಿತು. ನಿವೃತ್ತಿ ವಾಪಸ್ ಪಡೆದು ಕ್ರಿಕೆಟ್ಗೆ ಮರಳುವಂತೆ ಅವರು ಸೂಚಿಸಿದರು. ನನಗೆ ಇಲ್ಲ ಎನ್ನಲು ಆಗಲಿಲ್ಲ’ ಎಂದು ಪ್ರಧಾನಿ ಭೇಟಿಯ ಬಳಿಕ ತಮೀಮ್ ತಿಳಿಸಿದರು.</p><p>‘ಗಾಯದಿಂದ ಚೇತರಿಸಿಕೊಳ್ಳಲು ತಮೀಮ್, ಆರು ವಾರ ವಿಶ್ರಾಂತಿ ಪಡೆಯಲಿದ್ದಾರೆ. ಸೆಪ್ಟೆಂಬರ್ನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯ ವೇಳೆಗೆ ಅವರು ಪೂರ್ಣ ದೈಹಿಕ ಸಾಮರ್ಥ್ಯ ಹೊಂದುವುದು ಅಗತ್ಯ’ ಎಂದು ನಜ್ಮುಲ್ ಹಸನ್ ಮಾಹಿತಿ ನೀಡಿದರು.</p><p>ಅಫ್ಗಾನಿಸ್ತಾನ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಇನ್ನುಳಿದ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ತಂಡವನ್ನು ಲಿಟನ್ ದಾಸ್ ಮುನ್ನಡೆಸುವರು ಎಂದು ಬಿಸಿಬಿ ಶುಕ್ರವಾರ ಬೆಳಿಗ್ಗೆ ಪ್ರಕಟಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ತಮೀಮ್, ಪ್ರಧಾನಿ ಅವರನ್ನು ಭೇಟಿಯಾಗಿದ್ದಾರೆ.</p><p>ತಮೀಮ್ ಕೈಗೊಂಡ ನಿರ್ಧಾರ ಅಚ್ಚರಿ ಉಂಟು ಮಾಡಿದೆ ಎಂದು ಲಿಟನ್ ಹೇಳಿದ್ದರು. ‘ಅವರಿಂದ ಅಂತಹ ನಿರ್ಧಾರ ಬರಬಹುದು ಎಂದು ಯಾರೂ ಊಹಿಸಿರಲಿಲ್ಲ. ಹಲವು ವರ್ಷಗಳಿಂದ ಅವರು ತಂಡಕ್ಕಾಗಿ ಆಡಿದ್ದಾರೆ. ನಾನು ಹಾಗೂ ಸಹ ಆಟಗಾರರು ಅವರ ನಿರ್ಧಾರವನ್ನು ಗೌರವಿಸುತ್ತೇವೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>