ನವದೆಹಲಿ: ನ್ಯೂಜಿಲೆಂಡ್ ಎದುರಿನ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೂಡ ಆಡುತ್ತಿಲ್ಲ. ಆದ್ದರಿಂದ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸಲಿದ್ದಾರೆ.
ಗುರುವಾರ ಪ್ರಕಟಿಸಲಾದ ತಂಡದಲ್ಲಿ ಮೂವರು ಕನ್ನಡಿಗರು ಇದ್ದಾರೆ. ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್, ಮಯಂಕ್ ಅಗರವಾಲ್ ಮತ್ತು ಮಧ್ಯಮವೇಗಿ ಪ್ರಸಿದ್ಧಕೃಷ್ಣ ಸ್ಥಾನ ಪಡೆದುಕೊಂಡಿದ್ದಾರೆ.
ಕಾನ್ಪುರ ಮತ್ತು ಮುಂಬೈನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಗಳಲ್ಲಿ ವಿಕೆಟ್ಕೀಪರ್ ರಿಷಭ್ ಪಂತ್, ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಶಮಿ ಅವರೂ ಆಡುತ್ತಿಲ್ಲ. ವಿಕೆಟ್ಕೀಪರ್ಗಳಾದ ವೃದ್ಧಿಮಾನ್ ಸಹಾ ಮತ್ತು ಕೆ.ಎಸ್. ಭರತ್ ಸ್ಥಾನ ಪಡೆದಿದ್ದಾರೆ.
ಇದೇ 17ರಿಂದ ಆರಂಭವಾಗಲಿರುವ ಕಿವೀಸ್ ಎದುರಿನ ಟಿ20 ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವರು.