ಮುಂದಿನ ವರ್ಷ (2024ರಲ್ಲಿ) ನಡೆಯುವ ಚುಟುಕು ಕ್ರಿಕೆಟ್ ವಿಶ್ವಕಪ್ಗೆ ಈಗಿನಿಂದಲೇ ತಮಡ ಕಟ್ಟುವ ಯೋಜನೆಯಲ್ಲಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ರಾಷ್ಟ್ರೀಯ ಆಯ್ಕೆ ಸಮಿತಿಯು ಅನುಭವಿಗಳಾದ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮತ್ತು ಕರ್ನಾಟಕದ ವಿಕೆಟ್ಕೀಪರ್ ಬ್ಯಾಟರ್ ಕೆ.ಎಲ್.ರಾಹುಲ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಹೀಗಾಗಿ ಸೂರ್ಯ, ಲಂಕಾ ವಿರುದ್ಧದ ಸರಣಿಗೆ ಭಾರತ ತಂಡದಲ್ಲಿರುವ ಪ್ರಮುಖ ಬ್ಯಾಟರ್ ಎನಿಸಿದ್ದಾರೆ.