<p><strong>ನವದೆಹಲಿ: </strong>ಸಾಲು ಸಾಲು ಸೋಲುಗಳಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾ ಮಾಜಿ ಬ್ಯಾಟರ್ ಸುರೇಶ್ ರೈನಾ ಬೆಂಬಲಿಸಿದ್ದಾರೆ.</p><p>‘ಇತ್ತೀಚೆಗೆ ತವರಿನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಸಹಾಯಕ ಸಿಬ್ಬಂದಿ ಕಾರಣ ಎಂದು ಹೇಳಲಾಗುವುದಿಲ್ಲ. ಪಂದ್ಯದ ಫಲಿತಾಂಶಗಳಿಗೆ ಆಟಗಾರರು ಜವಾಬ್ದಾರರಾಗಿರಬೇಕು’ ಎಂದು ಅವರು ಹೇಳಿದ್ದಾರೆ.</p><p>ಕಳೆದ ವರ್ಷದ ಕೊನೆಯಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ ವೈಟ್ವಾಶ್ಗೆ ಒಳಗಾಗಿತ್ತು. ಇದೀಗ ಮತ್ತೊಮ್ಮೆ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಸೋಲಿನ ಸುಳಿಗೆ ಸಿಲುಕಿದೆ.</p><p>‘ಗೌತಿ ಭಯ್ಯಾ ನಿಜವಾಗಿಯೂ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಮತ್ತು ಪಂದ್ಯಗಳ ಸೋಲಿನಲ್ಲಿ ಅವರ ತಪ್ಪೇನೂ ಇಲ್ಲ. ಆಟಗಾರರು ನಿಜವಾಗಿಯೂ ಕಷ್ಟಪಟ್ಟು ಕೆಲಸ ಮಾಡಬೇಕು ಮತ್ತು ಉತ್ತಮವಾಗಿ ಆಡಬೇಕು. ಗಂಭಿರ್ ಅಡಿಯಲ್ಲಿ ನಾವು ವೈಟ್ ಬಾಲ್ ಸ್ವರೂಪದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಈ ವರ್ಷದ ಆರಂಭದಲ್ಲಿ ದುಬೈನಲ್ಲಿ ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಏಷ್ಯಾ ಕಪ್ ಗೆದ್ದಿದ್ದೇವೆ’ ಎಂದು ರೈನಾ ಪಿಟಿಐಗೆ ತಿಳಿಸಿದ್ದಾರೆ.</p><p>‘ಆಟಗಾರರು ಏನು ಮಾಡಬೇಕು ಎಂಬ ಗೋಲು ಹೊಂದಿರಬೇಕು. ತರಬೇತುದಾರರು ಆಟಗಾರರಿಗೆ ಮಾರ್ಗದರ್ಶನ, ಸಲಹೆ ಮತ್ತು ಬೆಂಬಲ ನೀಡಬಲ್ಲರು’ ಎಂದು ಅವರು ಇಂಡಿಯನ್ ಸಾಫ್ಟ್ಬಾಲ್ ಕ್ರಿಕೆಟ್ ಲೀಗ್ನ ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ರಾಯಭಾರಿಯಾಗಿ ಆಗಮಿಸಿ ಹೇಳಿದರು. </p>.ವಿರಾಟ್ ಕೊಹ್ಲಿಗೆ ಭಾರತರತ್ನ ನೀಡಿ: ಸುರೇಶ್ ರೈನಾ.ಬ್ಯಾಟರ್ಗಳ ಕೌಶಲ ಪ್ರಶ್ನಿಸಿದ ಗೌತಮ್ ಗಂಭೀರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸಾಲು ಸಾಲು ಸೋಲುಗಳಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರನ್ನು ಟೀಂ ಇಂಡಿಯಾ ಮಾಜಿ ಬ್ಯಾಟರ್ ಸುರೇಶ್ ರೈನಾ ಬೆಂಬಲಿಸಿದ್ದಾರೆ.</p><p>‘ಇತ್ತೀಚೆಗೆ ತವರಿನಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಸಹಾಯಕ ಸಿಬ್ಬಂದಿ ಕಾರಣ ಎಂದು ಹೇಳಲಾಗುವುದಿಲ್ಲ. ಪಂದ್ಯದ ಫಲಿತಾಂಶಗಳಿಗೆ ಆಟಗಾರರು ಜವಾಬ್ದಾರರಾಗಿರಬೇಕು’ ಎಂದು ಅವರು ಹೇಳಿದ್ದಾರೆ.</p><p>ಕಳೆದ ವರ್ಷದ ಕೊನೆಯಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ ವೈಟ್ವಾಶ್ಗೆ ಒಳಗಾಗಿತ್ತು. ಇದೀಗ ಮತ್ತೊಮ್ಮೆ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಸೋಲಿನ ಸುಳಿಗೆ ಸಿಲುಕಿದೆ.</p><p>‘ಗೌತಿ ಭಯ್ಯಾ ನಿಜವಾಗಿಯೂ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಮತ್ತು ಪಂದ್ಯಗಳ ಸೋಲಿನಲ್ಲಿ ಅವರ ತಪ್ಪೇನೂ ಇಲ್ಲ. ಆಟಗಾರರು ನಿಜವಾಗಿಯೂ ಕಷ್ಟಪಟ್ಟು ಕೆಲಸ ಮಾಡಬೇಕು ಮತ್ತು ಉತ್ತಮವಾಗಿ ಆಡಬೇಕು. ಗಂಭಿರ್ ಅಡಿಯಲ್ಲಿ ನಾವು ವೈಟ್ ಬಾಲ್ ಸ್ವರೂಪದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಈ ವರ್ಷದ ಆರಂಭದಲ್ಲಿ ದುಬೈನಲ್ಲಿ ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಏಷ್ಯಾ ಕಪ್ ಗೆದ್ದಿದ್ದೇವೆ’ ಎಂದು ರೈನಾ ಪಿಟಿಐಗೆ ತಿಳಿಸಿದ್ದಾರೆ.</p><p>‘ಆಟಗಾರರು ಏನು ಮಾಡಬೇಕು ಎಂಬ ಗೋಲು ಹೊಂದಿರಬೇಕು. ತರಬೇತುದಾರರು ಆಟಗಾರರಿಗೆ ಮಾರ್ಗದರ್ಶನ, ಸಲಹೆ ಮತ್ತು ಬೆಂಬಲ ನೀಡಬಲ್ಲರು’ ಎಂದು ಅವರು ಇಂಡಿಯನ್ ಸಾಫ್ಟ್ಬಾಲ್ ಕ್ರಿಕೆಟ್ ಲೀಗ್ನ ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ರಾಯಭಾರಿಯಾಗಿ ಆಗಮಿಸಿ ಹೇಳಿದರು. </p>.ವಿರಾಟ್ ಕೊಹ್ಲಿಗೆ ಭಾರತರತ್ನ ನೀಡಿ: ಸುರೇಶ್ ರೈನಾ.ಬ್ಯಾಟರ್ಗಳ ಕೌಶಲ ಪ್ರಶ್ನಿಸಿದ ಗೌತಮ್ ಗಂಭೀರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>