ಈ ಕುರಿತು ಈಗ ಪ್ರತಿಕ್ರಿಯೆ ನೀಡಿರುವ ಜಯ್ ಶಾ, ಸಮಯದ ಅಭಾವದಿಂದಾಗಿ ಪ್ರಕ್ರಿಯೆ ವಿಳಂಬಗೊಂಡಿತು. ದ್ರಾವಿಡ್ ಹಾಗೂ ತಂಡದೊಂದಿಗೆ ಮಾತುಕತೆ ನಡೆಸಬೇಕಿದೆ. ಕೋಚ್ ಆಗಿ ಮುಂದುವರಿಯಲು ಒಪ್ಪಿದ್ದಾರೆ. ಒಮ್ಮೆ, ದಕ್ಷಿಣ ಆಫ್ರಿಕಾ ಸರಣಿ ಮುಗಿಸಿ ಬಂದ ಬಳಿಕ ಈ ಕುರಿತು ಚರ್ಚಿಸಲಿದ್ದೇವೆ ಎಂದು ಹೇಳಿದ್ದಾರೆ.
ಅಫ್ಗಾನಿಸ್ತಾನ ಸರಣಿಗೆ ಹಾರ್ದಿಕ್ ಮರಳುವ ಸಾಧ್ಯತೆ...
ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಅಫ್ಗಾನಿಸ್ತಾನ ವಿರುದ್ಧದ ಸರಣಿ ವೇಳೆಗೆ ತಂಡಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಜಯ್ ಶಾ ತಿಳಿಸಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ಪುನಶ್ಚೇತನದಲ್ಲಿರುವ ಹಾರ್ದಿಕ್ ಅವರ ಮೇಲೆ ನಿಗಾ ವಹಿಸಿದ್ದೇವೆ. ಆದಷ್ಟು ಬೇಗ ದೈಹಿಕ ಸಾಮರ್ಥ್ಯ ಮರಳಿ ಪಡೆಯಲು ಅವರು ಪರಿಶ್ರಮ ವಹಿಸುತ್ತಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಅಫ್ಗಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಮರಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
2024ರಲ್ಲಿ ಹೊಸ ಎನ್ಸಿಎ ಸಿದ್ಧ...
ಬೆಂಗಳೂರು ಹೊರವಲಯದಲ್ಲಿ 40 ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ ಹೊಸ ಎನ್ಸಿಎ ಕೇಂದ್ರ 2024 ಆಗಸ್ಟ್ ವೇಳೆಗೆ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದು ಅವರು ತಿಳಿಸಿದರು.