‘ಈ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ. ಶ್ರೀಲಂಕಾ ಸರಣಿ ಮೊದಲು ಮುಗಿಯಲಿ. ಹೊಸ ಕೋಚ್ಗೆ ಅವಕಾಶ ನೀಡಿದರೆ ತಪ್ಪಿಲ್ಲ. ಆದರೆ, ರವಿಶಾಸ್ತ್ರಿ ಉತ್ತಮ ಫಲಿತಾಂಶ ನೀಡುತ್ತಿದ್ದಾರೆ. ಅವರನ್ನು ಮುಖ್ಯ ಕೋಚ್ ಸ್ಥಾನದಿಂದ ತೆಗೆಯಲು ಯಾವುದೇ ಕಾರಣವಿಲ್ಲ. ಕೋಚ್ ಮತ್ತು ಆಟಗಾರರ ಮೇಲೆ ಒತ್ತಡ ಹೇರಬಾರದು’ ಎಂದು ಕಪಿಲ್ ದೇವ್ ಅಭಿಪ್ರಾಯಪಟ್ಟಿದ್ದಾರೆ.