ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಸರಣಿಗೆ ನಟರಾಜನ್; ವಿಜಯ್ ಹಜಾರೆ ಟ್ರೋಫಿ ಟೂರ್ನಿಯಿಂದ ವಿಶ್ರಾಂತಿ

Last Updated 11 ಫೆಬ್ರುವರಿ 2021, 16:32 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಮುಂದಿನ ತಿಂಗಳು ಇಂಗ್ಲೆಂಡ್ ಎದುರು ನಡೆಯಲಿರುವ ಸೀಮಿತ ಓವರ್‌ಗಳ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಆಡಲು ಮಧ್ಯಮವೇಗಿ ಟಿ. ನಟರಾಜನ್ ಅವರಿಗೆ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿದೆ.

ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ನಟರಾಜನ್ ಫಿಟ್ ಆಗಿ ಉಳಿಯಲು ದೇಶಿ ಏಕದಿನ ಟೂರ್ನಿಯಲ್ಲಿ ಆಡಿಸದಿರಲು ಬಿಸಿಸಿಐ ತಮಿಳುನಾಡು ಕ್ರಿಕೆಟ್ ಸಂಸ್ಥೆಗೆ ಮನವಿ ಮಾಡಿತ್ತು. ಇದನ್ನು ಪರಿಗಣಿಸಿರುವ ಸಂಸ್ಥೆಯು ತಮಿಳುನಾಡು ತಂಡದಿಂದ ನಟರಾಜನ್ ಅವರನ್ನು ಬಿಡುಗಡೆ ಮಾಡಿದೆ.

’ನಟರಾಜನ್ ಅವರಿಗೆ ಭಾರತ ತಂಡದಲ್ಲಿ ಆಡುವ ಅವಕಾಶ ಸಿಕ್ಕಿರುವುದು ಸಂತಸದ ವಿಷಯ. ರಾಷ್ಟ್ರೀಯ ತಂಡದ ಮನವಿಯನ್ನು ಪರಿಗಣಿಸಿದ್ದೇವೆ‘ ಎಂದು ಟಿಎನ್‌ಸಿಎ ಕಾರ್ಯದರ್ಶಿ ಆರ್.ಎಸ್. ರಾಮಸ್ವಾಮಿ ತಿಳಿಸಿದ್ದಾರೆ.

ನಟರಾಜನ್ ಬದಲು ಆರ್.ಎಸ್. ಜಗನ್ನಾಥ್ ಶ್ರೀನಿವಾಸ್ ಅವರನ್ನು ರಾಜ್ಯ ತಂಡಕ್ಕೆ ಆಯ್ಕೆ ಮಾಡಲಾಗಿದೆ. ತಂಡವು ಇದೇ 13ರಂದು ಇಂದೋರ್‌ಗೆ ತೆರಳಲಿದೆ. 20ರಿಂದ ಟೂರ್ನಿ ಆರಂಭವಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT