<p><strong>ನವದೆಹಲಿ: </strong>ಭಾರತದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿವೆ. ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ (ಯುಎಇ) ಆಯೋಜಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.</p>.<p>ಶುಕ್ರವಾರ ಆನ್ಲೈನ್ ಮೂಲಕ ನಡೆದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.</p>.<p>ಈ ವರ್ಷದ ಅಕ್ಟೋಬರ್ 18 ರಿಂದ ನವೆಂಬರ್ 15ರವರೆಗೆ ಆಸ್ಟ್ರೇಲಿಯಾದಲ್ಲಿ ನಿಗದಿಯಾಗಿರುವ ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಮುಂದೂಡುವ ಸಾಧ್ಯತೆ ಇದೆ. ಹೀಗಾಗಿ ಈ ಅವಧಿಯಲ್ಲೇ 13ನೇ ಆವೃತ್ತಿಯ ಐಪಿಎಲ್ ಆಯೋಜಿಸಲು ಬಿಸಿಸಿಐ ಉತ್ಸುಕವಾಗಿದೆ. </p>.<p>ಸೀನಿಯರ್ ಕ್ರಿಕೆಟ್ ತಂಡದ ತರಬೇತಿ ಶಿಬಿರವನ್ನೂ ಯುಎಇಯಲ್ಲಿ ನಡೆಸಲು ಬಿಸಿಸಿಐ ಚಿಂತಿಸಿದೆ. ಅಹಮದಾಬಾದ್ ಹಾಗೂ ಧರ್ಮಶಾಲಾವು ಮಂಡಳಿಯ ಎದುರಿರುವ ಇತರ ಆಯ್ಕೆಗಳಾಗಿವೆ.</p>.<p>ಕೋವಿಡ್ ಬಿಕ್ಕಟ್ಟಿನಿಂದಾಗಿ ಭಾರತದ ಕ್ರಿಕೆಟಿಗರು ಮೈದಾನಗಳಿಂದ ದೂರವೇ ಉಳಿದಿದ್ದಾರೆ. ಯುಎಇಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆ ಇವೆ. ಹೀಗಾಗಿ ಐಪಿಎಲ್ ಹಾಗೂ ಕ್ರಿಕೆಟಿಗರ ತರಬೇತಿ ಶಿಬಿರಗಳನ್ನು ಅಲ್ಲಿಯೇ ಆಯೋಜಿಸುವುದು ಸೂಕ್ತ ಎಂದು ಹಲವರು ಹೇಳಿದ್ದಾರೆ. ಈ ಸಂಬಂಧ ಐಪಿಎಲ್ ಆಡಳಿತ ಮಂಡಳಿಯು ಅಂತಿಮ ತೀರ್ಮಾನ ಕೈಗೊಳ್ಳಲಿದೆ.</p>.<p>‘ಒಂದು ವೇಳೆ ಯುಎಇನಲ್ಲಿ ಐಪಿಎಲ್ ನಡೆಯುವುದು ಖಚಿತವಾದರೆ, ಟೂರ್ನಿಗಿಂತ ಮೊದಲು ಭಾರತದ ಕ್ರಿಕೆಟಿಗರು ಅಲ್ಲಿ ತರಬೇತಿ ಪಡೆಯಬಹುದು. ದುಬೈನಲ್ಲಿ ಉತ್ತಮ ಮೂಲಸೌಕರ್ಯಗಳಿವೆ. ಕೋವಿಡ್ ಹಿನ್ನೆಲೆಯಲ್ಲಿ ಭಾರತದಲ್ಲಿ ಟೂರ್ನಿ ನಡೆಸುವುದು ಸುರಕ್ಷಿತವಲ್ಲ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಧರ್ಮಶಾಲಾ ಹಾಗೂ ಅಹಮದಾಬಾದ್ನಲ್ಲಿ (ನವೀಕೃತ ಮೊಟೆರಾ ಕ್ರೀಡಾಂಗಣದಲ್ಲಿ)ಜೀವ ಸುರಕ್ಷಾ (ಬಯೊ ಸೆಕ್ಯುರ್) ವಾತಾವರಣದಲ್ಲಿ ತರಬೇತಿ ಶಿಬಿರ ಆಯೋಜಿಸುವ ಬಗ್ಗೆಯೂ ಬಿಸಿಸಿಐ ಚಿಂತಿಸಿದೆ. ಆದರೆ ಅದು ಅಷ್ಟು ಸುರಕ್ಷಿತವಲ್ಲ ಎಂಬುದೂ ಮಂಡಳಿಗೆ ಗೊತ್ತಿದೆ’ ಎಂದು ಅವರು ನುಡಿದಿದ್ದಾರೆ.</p>.<p>ಶ್ರೀಲಂಕಾ ಕೂಡ ಐಪಿಎಲ್ ಆಯೋಜಿಸಲು ಆಸಕ್ತಿ ತೋರಿತ್ತು. 2014ರಲ್ಲಿ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದ ಸಂದರ್ಭದಲ್ಲಿ ಯುಎಇನಲ್ಲಿ ಐಪಿಎಲ್ನ ಕೆಲವು ಪಂದ್ಯಗಳು ಆಯೋಜನೆಗೊಂಡಿದ್ದವು.</p>.<p>ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಅಧಿಕಾರಾವಧಿ ಕೊನೆಗೊಂಡಿದೆ ಎಂದು ಹೇಳಲಾಗಿತ್ತು. ಆದರೆ ಶುಕ್ರವಾರದ ಸಭೆಯಲ್ಲಿ ಅವರೂ ಪಾಲ್ಗೊಂಡಿದ್ದರು.</p>.<p>‘ಬಿಸಿಸಿಐನ ಕಾನೂನು ತಂಡವು ಅವರ ಉಪಸ್ಥಿತಿಯನ್ನು ಒಪ್ಪಿಕೊಂಡ ಕಾರಣ ಜಯ್ ಶಾ ಸಭೆಯಲ್ಲಿ ಭಾಗವಹಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಅಧಿಕಾರಾವಧಿಯು ಇದೇ 27ಕ್ಕೆ ಕೊನೆಗೊಳ್ಳಲಿದೆ. ಗಂಗೂಲಿ,ಕಾರ್ಯದರ್ಶಿ ಜಯ್ ಶಾ ಹಾಗೂ ಜಂಟಿ ಕಾರ್ಯದರ್ಶಿ ಜಯೇಶ್ ಜಾರ್ಜ್ ಅವರನ್ನು ಈ ಹುದ್ದೆಗಳಲ್ಲಿ ಮುಂದುವರಿಸುವಂತೆ ಬಿಸಿಸಿಐ, ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿವೆ. ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ (ಯುಎಇ) ಆಯೋಜಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.</p>.<p>ಶುಕ್ರವಾರ ಆನ್ಲೈನ್ ಮೂಲಕ ನಡೆದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.</p>.<p>ಈ ವರ್ಷದ ಅಕ್ಟೋಬರ್ 18 ರಿಂದ ನವೆಂಬರ್ 15ರವರೆಗೆ ಆಸ್ಟ್ರೇಲಿಯಾದಲ್ಲಿ ನಿಗದಿಯಾಗಿರುವ ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಮುಂದೂಡುವ ಸಾಧ್ಯತೆ ಇದೆ. ಹೀಗಾಗಿ ಈ ಅವಧಿಯಲ್ಲೇ 13ನೇ ಆವೃತ್ತಿಯ ಐಪಿಎಲ್ ಆಯೋಜಿಸಲು ಬಿಸಿಸಿಐ ಉತ್ಸುಕವಾಗಿದೆ. </p>.<p>ಸೀನಿಯರ್ ಕ್ರಿಕೆಟ್ ತಂಡದ ತರಬೇತಿ ಶಿಬಿರವನ್ನೂ ಯುಎಇಯಲ್ಲಿ ನಡೆಸಲು ಬಿಸಿಸಿಐ ಚಿಂತಿಸಿದೆ. ಅಹಮದಾಬಾದ್ ಹಾಗೂ ಧರ್ಮಶಾಲಾವು ಮಂಡಳಿಯ ಎದುರಿರುವ ಇತರ ಆಯ್ಕೆಗಳಾಗಿವೆ.</p>.<p>ಕೋವಿಡ್ ಬಿಕ್ಕಟ್ಟಿನಿಂದಾಗಿ ಭಾರತದ ಕ್ರಿಕೆಟಿಗರು ಮೈದಾನಗಳಿಂದ ದೂರವೇ ಉಳಿದಿದ್ದಾರೆ. ಯುಎಇಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆ ಇವೆ. ಹೀಗಾಗಿ ಐಪಿಎಲ್ ಹಾಗೂ ಕ್ರಿಕೆಟಿಗರ ತರಬೇತಿ ಶಿಬಿರಗಳನ್ನು ಅಲ್ಲಿಯೇ ಆಯೋಜಿಸುವುದು ಸೂಕ್ತ ಎಂದು ಹಲವರು ಹೇಳಿದ್ದಾರೆ. ಈ ಸಂಬಂಧ ಐಪಿಎಲ್ ಆಡಳಿತ ಮಂಡಳಿಯು ಅಂತಿಮ ತೀರ್ಮಾನ ಕೈಗೊಳ್ಳಲಿದೆ.</p>.<p>‘ಒಂದು ವೇಳೆ ಯುಎಇನಲ್ಲಿ ಐಪಿಎಲ್ ನಡೆಯುವುದು ಖಚಿತವಾದರೆ, ಟೂರ್ನಿಗಿಂತ ಮೊದಲು ಭಾರತದ ಕ್ರಿಕೆಟಿಗರು ಅಲ್ಲಿ ತರಬೇತಿ ಪಡೆಯಬಹುದು. ದುಬೈನಲ್ಲಿ ಉತ್ತಮ ಮೂಲಸೌಕರ್ಯಗಳಿವೆ. ಕೋವಿಡ್ ಹಿನ್ನೆಲೆಯಲ್ಲಿ ಭಾರತದಲ್ಲಿ ಟೂರ್ನಿ ನಡೆಸುವುದು ಸುರಕ್ಷಿತವಲ್ಲ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಧರ್ಮಶಾಲಾ ಹಾಗೂ ಅಹಮದಾಬಾದ್ನಲ್ಲಿ (ನವೀಕೃತ ಮೊಟೆರಾ ಕ್ರೀಡಾಂಗಣದಲ್ಲಿ)ಜೀವ ಸುರಕ್ಷಾ (ಬಯೊ ಸೆಕ್ಯುರ್) ವಾತಾವರಣದಲ್ಲಿ ತರಬೇತಿ ಶಿಬಿರ ಆಯೋಜಿಸುವ ಬಗ್ಗೆಯೂ ಬಿಸಿಸಿಐ ಚಿಂತಿಸಿದೆ. ಆದರೆ ಅದು ಅಷ್ಟು ಸುರಕ್ಷಿತವಲ್ಲ ಎಂಬುದೂ ಮಂಡಳಿಗೆ ಗೊತ್ತಿದೆ’ ಎಂದು ಅವರು ನುಡಿದಿದ್ದಾರೆ.</p>.<p>ಶ್ರೀಲಂಕಾ ಕೂಡ ಐಪಿಎಲ್ ಆಯೋಜಿಸಲು ಆಸಕ್ತಿ ತೋರಿತ್ತು. 2014ರಲ್ಲಿ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದ ಸಂದರ್ಭದಲ್ಲಿ ಯುಎಇನಲ್ಲಿ ಐಪಿಎಲ್ನ ಕೆಲವು ಪಂದ್ಯಗಳು ಆಯೋಜನೆಗೊಂಡಿದ್ದವು.</p>.<p>ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಅಧಿಕಾರಾವಧಿ ಕೊನೆಗೊಂಡಿದೆ ಎಂದು ಹೇಳಲಾಗಿತ್ತು. ಆದರೆ ಶುಕ್ರವಾರದ ಸಭೆಯಲ್ಲಿ ಅವರೂ ಪಾಲ್ಗೊಂಡಿದ್ದರು.</p>.<p>‘ಬಿಸಿಸಿಐನ ಕಾನೂನು ತಂಡವು ಅವರ ಉಪಸ್ಥಿತಿಯನ್ನು ಒಪ್ಪಿಕೊಂಡ ಕಾರಣ ಜಯ್ ಶಾ ಸಭೆಯಲ್ಲಿ ಭಾಗವಹಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಅಧಿಕಾರಾವಧಿಯು ಇದೇ 27ಕ್ಕೆ ಕೊನೆಗೊಳ್ಳಲಿದೆ. ಗಂಗೂಲಿ,ಕಾರ್ಯದರ್ಶಿ ಜಯ್ ಶಾ ಹಾಗೂ ಜಂಟಿ ಕಾರ್ಯದರ್ಶಿ ಜಯೇಶ್ ಜಾರ್ಜ್ ಅವರನ್ನು ಈ ಹುದ್ದೆಗಳಲ್ಲಿ ಮುಂದುವರಿಸುವಂತೆ ಬಿಸಿಸಿಐ, ಸುಪ್ರೀಂಕೋರ್ಟ್ಗೆ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>