<p><strong>ಸಿಡ್ನಿ</strong>: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತವು ಪಾಕಿಸ್ತಾನಕ್ಕೆ ತೆರಳದಿರುವುದು ದುರದೃಷ್ಟಕರ ಎಂದು ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವ್ಯಾಟ್ಸನ್ ಅಭಿಪ್ರಾಯಪಟ್ಟಿದ್ದಾರೆ.</p><p>ಆದರೆ, ಐಸಿಸಿಯ ಈ ಪಂದ್ಯಾವಳಿಯು ಸ್ಟಾರ್ ಬ್ಯಾಟರ್ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ದೀರ್ಘಕಾಲದ ಫಾರ್ಮ್ ಕುಸಿತದಿಂದ ಮುಕ್ತಗೊಳ್ಳಲು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.</p><p>ಪಾಕಿಸ್ತಾನಕ್ಕೆ ತೆರಳಲು ಭಾರತ ಸರ್ಕಾರ ಭದ್ರತೆಯ ಕಾರಣದಿಂದ ಅವಕಾಶ ನೀಡದ ಹಿನ್ನೆಲೆಯಲ್ಲಿ ಭಾರತದ ಪಂದ್ಯಗಳನ್ನು ಹೈಬ್ರಿಡ್ ಮಾದರಿಯಲ್ಲಿ ದುಬೈನಲ್ಲಿ ನಡೆಸಲು ಐಸಿಸಿ ನಿರ್ಧರಿಸಿದೆ.</p><p>ಆದರೆ, ಭಾರತ ಮತ್ತು ಪಾಕಿಸ್ತಾನ ಪಂದ್ಯ ಎಲ್ಲೇ ನಡೆದರೂ ಅಭಿಮಾನಿಗಳು ಕಾತರರಾಗಿತ್ತಾರೆ ಎಂದಿದ್ದಾರೆ.</p> <p>ವಿಶ್ವ ಕ್ರಿಕೆಟ್ಗೆ ಚಾಂಪಿಯನ್ಸ್ ಟ್ರೋಫಿ ಬಹಳ ಮುಖ್ಯ. ಏಕೆಂದರೆ, ಏಕದಿನ ಕ್ರಿಕೆಟ್ ವಿಶ್ವಕಪ್ನ 4 ವರ್ಷಗಳ ಅಂತರವನ್ನು ಇದು ತುಂಬುತ್ತದೆ. ಟಿ–20 ಅಬ್ಬರದ ನಡುವೆ ಏಕದಿನ ಕ್ರಿಕೆಟ್ ಉಳಿವಿಗೆ ಇದು ಅತ್ಯಂತ ಸಹಾಯಕಾರಿ ಎಂದಿದ್ದಾರೆ.</p><p>‘ಏಕದಿನ ಕ್ರಿಕೆಟ್ ಅತ್ಯಂತ ಪ್ರಮುಖವಾದದ್ದು. ಆಗಾಗ್ಗೆ ಈ ಸಂಬಂಧಿತ ಪಂದ್ಯಾವಳಿ ನಡೆಯುತ್ತಿರಬೇಕು. ಚಾಂಪಿಯನ್ಸ್ ಅಂತಹದ್ದೇ ಟೂರ್ನಿ’ಎಂದು ವ್ಯಾಟ್ಸನ್ ಹೇಳಿದ್ದಾರೆ.</p><p>*****************************************</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ</strong>: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತವು ಪಾಕಿಸ್ತಾನಕ್ಕೆ ತೆರಳದಿರುವುದು ದುರದೃಷ್ಟಕರ ಎಂದು ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವ್ಯಾಟ್ಸನ್ ಅಭಿಪ್ರಾಯಪಟ್ಟಿದ್ದಾರೆ.</p><p>ಆದರೆ, ಐಸಿಸಿಯ ಈ ಪಂದ್ಯಾವಳಿಯು ಸ್ಟಾರ್ ಬ್ಯಾಟರ್ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ದೀರ್ಘಕಾಲದ ಫಾರ್ಮ್ ಕುಸಿತದಿಂದ ಮುಕ್ತಗೊಳ್ಳಲು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.</p><p>ಪಾಕಿಸ್ತಾನಕ್ಕೆ ತೆರಳಲು ಭಾರತ ಸರ್ಕಾರ ಭದ್ರತೆಯ ಕಾರಣದಿಂದ ಅವಕಾಶ ನೀಡದ ಹಿನ್ನೆಲೆಯಲ್ಲಿ ಭಾರತದ ಪಂದ್ಯಗಳನ್ನು ಹೈಬ್ರಿಡ್ ಮಾದರಿಯಲ್ಲಿ ದುಬೈನಲ್ಲಿ ನಡೆಸಲು ಐಸಿಸಿ ನಿರ್ಧರಿಸಿದೆ.</p><p>ಆದರೆ, ಭಾರತ ಮತ್ತು ಪಾಕಿಸ್ತಾನ ಪಂದ್ಯ ಎಲ್ಲೇ ನಡೆದರೂ ಅಭಿಮಾನಿಗಳು ಕಾತರರಾಗಿತ್ತಾರೆ ಎಂದಿದ್ದಾರೆ.</p> <p>ವಿಶ್ವ ಕ್ರಿಕೆಟ್ಗೆ ಚಾಂಪಿಯನ್ಸ್ ಟ್ರೋಫಿ ಬಹಳ ಮುಖ್ಯ. ಏಕೆಂದರೆ, ಏಕದಿನ ಕ್ರಿಕೆಟ್ ವಿಶ್ವಕಪ್ನ 4 ವರ್ಷಗಳ ಅಂತರವನ್ನು ಇದು ತುಂಬುತ್ತದೆ. ಟಿ–20 ಅಬ್ಬರದ ನಡುವೆ ಏಕದಿನ ಕ್ರಿಕೆಟ್ ಉಳಿವಿಗೆ ಇದು ಅತ್ಯಂತ ಸಹಾಯಕಾರಿ ಎಂದಿದ್ದಾರೆ.</p><p>‘ಏಕದಿನ ಕ್ರಿಕೆಟ್ ಅತ್ಯಂತ ಪ್ರಮುಖವಾದದ್ದು. ಆಗಾಗ್ಗೆ ಈ ಸಂಬಂಧಿತ ಪಂದ್ಯಾವಳಿ ನಡೆಯುತ್ತಿರಬೇಕು. ಚಾಂಪಿಯನ್ಸ್ ಅಂತಹದ್ದೇ ಟೂರ್ನಿ’ಎಂದು ವ್ಯಾಟ್ಸನ್ ಹೇಳಿದ್ದಾರೆ.</p><p>*****************************************</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>