‘ಇದೊಂದು ಚುಟುಕು ಅವಧಿಯ ಪ್ರವಾಸವಾಗಿದೆ. ಮೊದಲೇ ಇದನ್ನು ಯಾರೂ ಊಹಿಸಿರಲಿಲ್ಲ. ಆಯಾಚಿತವಾಗಿ ಒದಗಿಬಂದಿದೆ. ಆಟಗಾರರು ತಮ್ಮ ಸಾಮರ್ಥ್ಯ ಸಾಬೀತುಮಾಡಲು ಉತ್ತಮ ವೇದಿಕೆಯಾಗಿದೆ. ಏಕದಿನ ಅಥವಾ ಟಿ20 ಪಂದ್ಯಗಳಲ್ಲಿ ತಮಗೆ ಲಭಿಸುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಏಕೆಂದರೆ, ಈ ಸರಣಿಯನ್ನು ಆಯ್ಕೆ ಸಮಿತಿಯ ಸದಸ್ಯರು ವೀಕ್ಷಿಸಲಿದ್ದಾರೆ‘ ಎಂದು ರಾಹುಲ್ ಹೇಳಿದರು.