<p><strong>ಅಬುಧಾಬಿ:</strong> ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಯುವ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಲು ಭಾರೀ ಪೈಪೋಟಿ ನಡೆಸಿ ಅಂತಿಮ ಹಂತದಲ್ಲಿ ಕೊಲ್ಕತ್ತ ನೈಟ್ ರೈಡರ್ಸ್ಗೆ ಬಿಟ್ಟುಕೊಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ₹7 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.</p><p>ವೆಂಕಟೇಶ್ ಅಯ್ಯರ್ಗಾಗಿ ಕೆಕೆಆರ್ ಜೊತೆ ಆರಂಭದಿಂದಲೂ ಪೈಪೋಟಿ ನಡೆಸಿದ ಆರ್ಸಿಬಿ ಫ್ರಾಂಚೈಸಿ ಅಂತಿಮವಾಗಿ ₹7 ಕೋಟಿಗೆ ತಂಡಕ್ಕೆ ಸೇರಿಸಿಕೊಂಡಿದೆ. ಆ ಮೂಲಕ ತಂಡದ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಗೊಳಿಸಿದೆ. </p>.IPL 2026: ಹಾಲಿ ಚಾಂಪಿಯನ್ ಆರ್ಸಿಬಿ ತೆಕ್ಕೆಗೆ ವೆಂಕಟೇಶ್; ಸಂಪೂರ್ಣ ತಂಡ ಹೀಗಿದೆ.IPL 2026 ರಾಹುಲ್, ಪಡಿಕ್ಕಲ್ ಸೇರಿ 9 ಕನ್ನಡಿಗರು; ಯಾರು, ಯಾವ ತಂಡದಲ್ಲಿದ್ದಾರೆ?.<p>ಆರ್ಸಿಬಿ ಸೇರಿದ ವೆಂಕಟೇಶ್ ಅಯ್ಯರ್ ಪ್ರತಿಕ್ರಿಯೆ ನೀಡಿದ್ದು, ‘ನಮಸ್ಕಾರ ಬೆಂಗಳೂರು, ನಾನು ಆರ್ಸಿಬಿ ತಂಡವನ್ನು ಸೇರಿಕೊಳ್ಳಲು ತುಂಬಾ ಉತ್ಸುಕನಾಗಿದ್ದೇನೆ. ಆರ್ಸಿಬಿ ತಂಡದ ಭಾಗವಾಗಿರುವುದಕ್ಕೆ ಸಂತಸವಾಗುತ್ತಿದೆ. ತಂಡದ ನಿರ್ವಾಹಕರಿಗೆ ಧನ್ಯವಾದಗಳು’ ಎಂದಿದ್ದಾರೆ. </p>.<p>‘ನನ್ನ ಮೇಲೆ ನಂಬಿಕೆ ಇಟ್ಟು, ನನ್ನನ್ನು ಖರೀದಿಸಿದ ಫ್ರಾಂಚೈಸಿ ಹಾಗೂ ತಂಡದ ಮ್ಯಾನೆಜ್ಮೆಂಟ್ಗೆ ಧನ್ಯವಾದಗಳು, ಮುಂದಿನ ಸೀಸನ್ ಅನ್ನು ಚಾಂಪಿಯನ್ ತಂಡದ ಭಾಗವಾಗಿ ಆಡುವುದಕ್ಕೆ ಬಹಳ ಸಂತೋಷವಾಗುತ್ತಿದೆ, ಪ್ಲೇ ಬೋಲ್ಡ್’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಬುಧಾಬಿ:</strong> ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಯುವ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಲು ಭಾರೀ ಪೈಪೋಟಿ ನಡೆಸಿ ಅಂತಿಮ ಹಂತದಲ್ಲಿ ಕೊಲ್ಕತ್ತ ನೈಟ್ ರೈಡರ್ಸ್ಗೆ ಬಿಟ್ಟುಕೊಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ₹7 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.</p><p>ವೆಂಕಟೇಶ್ ಅಯ್ಯರ್ಗಾಗಿ ಕೆಕೆಆರ್ ಜೊತೆ ಆರಂಭದಿಂದಲೂ ಪೈಪೋಟಿ ನಡೆಸಿದ ಆರ್ಸಿಬಿ ಫ್ರಾಂಚೈಸಿ ಅಂತಿಮವಾಗಿ ₹7 ಕೋಟಿಗೆ ತಂಡಕ್ಕೆ ಸೇರಿಸಿಕೊಂಡಿದೆ. ಆ ಮೂಲಕ ತಂಡದ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಗೊಳಿಸಿದೆ. </p>.IPL 2026: ಹಾಲಿ ಚಾಂಪಿಯನ್ ಆರ್ಸಿಬಿ ತೆಕ್ಕೆಗೆ ವೆಂಕಟೇಶ್; ಸಂಪೂರ್ಣ ತಂಡ ಹೀಗಿದೆ.IPL 2026 ರಾಹುಲ್, ಪಡಿಕ್ಕಲ್ ಸೇರಿ 9 ಕನ್ನಡಿಗರು; ಯಾರು, ಯಾವ ತಂಡದಲ್ಲಿದ್ದಾರೆ?.<p>ಆರ್ಸಿಬಿ ಸೇರಿದ ವೆಂಕಟೇಶ್ ಅಯ್ಯರ್ ಪ್ರತಿಕ್ರಿಯೆ ನೀಡಿದ್ದು, ‘ನಮಸ್ಕಾರ ಬೆಂಗಳೂರು, ನಾನು ಆರ್ಸಿಬಿ ತಂಡವನ್ನು ಸೇರಿಕೊಳ್ಳಲು ತುಂಬಾ ಉತ್ಸುಕನಾಗಿದ್ದೇನೆ. ಆರ್ಸಿಬಿ ತಂಡದ ಭಾಗವಾಗಿರುವುದಕ್ಕೆ ಸಂತಸವಾಗುತ್ತಿದೆ. ತಂಡದ ನಿರ್ವಾಹಕರಿಗೆ ಧನ್ಯವಾದಗಳು’ ಎಂದಿದ್ದಾರೆ. </p>.<p>‘ನನ್ನ ಮೇಲೆ ನಂಬಿಕೆ ಇಟ್ಟು, ನನ್ನನ್ನು ಖರೀದಿಸಿದ ಫ್ರಾಂಚೈಸಿ ಹಾಗೂ ತಂಡದ ಮ್ಯಾನೆಜ್ಮೆಂಟ್ಗೆ ಧನ್ಯವಾದಗಳು, ಮುಂದಿನ ಸೀಸನ್ ಅನ್ನು ಚಾಂಪಿಯನ್ ತಂಡದ ಭಾಗವಾಗಿ ಆಡುವುದಕ್ಕೆ ಬಹಳ ಸಂತೋಷವಾಗುತ್ತಿದೆ, ಪ್ಲೇ ಬೋಲ್ಡ್’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>