ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜು ಮೆಟ್ಟಿಲು ಹತ್ತದ ನನಗೆ ಉನ್ನತ ಶಿಕ್ಷಣ ಖಾತೆ: ಜಿ.ಟಿ.ದೇವೇಗೌಡ ಅಸಮಾಧಾನ

Last Updated 9 ಜೂನ್ 2018, 8:29 IST
ಅಕ್ಷರ ಗಾತ್ರ

ಮೈಸೂರು: ತಮಗೆ ಹಂಚಿಕೆ ಮಾಡಿರುವ ಉನ್ನತ ಶಿಕ್ಷಣ ಖಾತೆ ಬಗ್ಗೆ ಸಚಿವ ಜಿ.ಟಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಜನರೊಂದಿಗೆ ಬೆರೆತು ಕೆಲಸ ಮಾಡಲು ಸಾಧ್ಯವಾಗುವ ಖಾತೆ ಬಯಸಿದ್ದೆ. ಕಂದಾಯ ಅಥವಾ ಸಾರಿಗೆ ಖಾತೆ ಸಿಗಬಹುದು ಎಂದುಕೊಂಡಿದ್ದೆ. ಆದರೆ, ಕಾಲೇಜು ಮೆಟ್ಟಿಲು ಹತ್ತದ ನನಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದಾರೆ’ ಎಂದು ದೇವೇಗೌಡರು ತಮ್ಮ ಆಪ್ತರ ಬಳಿ ಬೇಸರ ತೋಡಿಕೊಂಡಿದ್ದಾರೆ.

ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸದ ಎದುರು ಶನಿವಾರ ಬೆಂಬಲಿಗರು ಹಾಗೂ ಜೆಡಿಎಸ್‌ನ ಸ್ಥಳೀಯ ಕಾರ್ಯಕರ್ತರು ಪ್ರತಿಭಟನೆ ಕೂಡ ನಡೆಸಿದ್ದಾರೆ. ಯಾರ ಕೈಗೂ ಸಿಗದ ದೇವೇಗೌಡರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಅವರ ಪುತ್ರ ಜಿ.ಡಿ.ಹರೀಶ್‌ ಅವರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಯಾವುದೇ ಕಾರಣಕ್ಕೂ ಈ ಖಾತೆ ಒಪ್ಪಿಕೊಳ್ಳಬಾರದು, ದೇವೇಗೌಡರು ಮೌನ ವಹಿಸಬಾರದು’ ಎಂದು ಆಗ್ರಹಿಸಿದ್ದಾರೆ.

‘ಕಾರ್ಯಕರ್ತರು, ಬೆಂಬಲಿಗರ ಮನವಿಯನ್ನು ಕುಮಾರಸ್ವಾಮಿ ಗಮನಕ್ಕೆ ತರುತ್ತೇವೆ. ಖಾತೆ ಬದಲಾವಣೆಯ ವಿಶ್ವಾಸವಿದೆ. ಕಾಲಾವಕಾಶ ಕೊಡಿ’ ಎಂದು ಕಾರ್ಯಕರ್ತರಿಗೆ ಹರೀಶ್‌ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT