<p><strong>ಅಹಮದಾಬಾದ್:</strong> ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡವು 4 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿದೆ.</p><p>ಗುಜರಾತ್ ಕಾಲೇಜ್ ಗ್ರೌಂಡ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. </p><p>ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು ತಂಡದ ಪರ ನಾಯಕ ಎನ್. ಜಗದೀಶನ್(65 ರನ್) ಹಾಗೂ ಪ್ರದೋಶ್ ಪಾಲ್(57 ರನ್) ಅರ್ಧಶತಕ ಬಾರಿಸಿದರು. ತಂಡವು 49.5 ಓವರ್ಗಳಲ್ಲಿ 288 ರನ್ಗಳಿಗೆ ಆಲೌಟ್ ಆಗಿತ್ತು. </p><p>ಕರ್ನಾಟಕ ಪರ ಅಭಿಲಾಶ್ ಶೆಟ್ಟಿ 4 ವಿಕೆಟ್, ವಿದ್ಯಾದರ್ ಪಾಟೀಲ್ ಹಾಗೂ ಶ್ರೀಶಾ ಆಚಾರ್ ತಲಾ 2 ವಿಕೆಟ್ ಪಡೆದು ಮಿಂಚಿದರು. </p><p>289 ರನ್ ಗುರಿ ಬೆನ್ನಟ್ಟಿದ ಕರ್ನಾಟಕ ತಂಡವು ಉತ್ತಮ ಲಯದಲ್ಲಿದ್ದ ಆರಂಭಿಕ ಆಟಗಾರ ದೇವದತ್ತ ಪಡೀಕ್ಕಲ್(22 ರನ್) ಅವರ ವಿಕೆಟ್ ಅನ್ನು ಬೇಗನೇ ಕಳೆದುಕೊಂಡಿತು. </p><p>ನಾಯಕ ಮಯಂಕ್ ಅಗರವಾಲ್(58 ರನ್), ವಿಕೆಟ್ ಕೀಪರ್ ಬ್ಯಾಟರ್ ಕೃಷ್ಣನ್ ಶ್ರೀಜಿತ್ (77 ರನ್) ಹಾಗೂ ಶ್ರೇಯಸ್ ಗೋಪಾಲ್ (55 ರನ್) ಅರ್ಧಶತಕದ ನೆರವಿನಿಂದ 47.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. </p><p>ತಮಿಳುನಾಡು ವಿರುದ್ಧ 4 ವಿಕೆಟ್ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡವು ಟೂರ್ನಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಗೆದ್ದು, ಟೂರ್ನಿಯಲ್ಲಿ ಅಜೇಯವಾಗಿ ಉಳಿದಿದೆ. </p>.ಟಿ20 ಪಂದ್ಯದಲ್ಲಿ 8 ವಿಕೆಟ್ ಪಡೆಯುವ ಮೂಲಕ ವಿಶ್ವದಾಖಲೆ ಬರೆದ ಭೂತಾನ್ ಆಟಗಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡವು 4 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿದೆ.</p><p>ಗುಜರಾತ್ ಕಾಲೇಜ್ ಗ್ರೌಂಡ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. </p><p>ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು ತಂಡದ ಪರ ನಾಯಕ ಎನ್. ಜಗದೀಶನ್(65 ರನ್) ಹಾಗೂ ಪ್ರದೋಶ್ ಪಾಲ್(57 ರನ್) ಅರ್ಧಶತಕ ಬಾರಿಸಿದರು. ತಂಡವು 49.5 ಓವರ್ಗಳಲ್ಲಿ 288 ರನ್ಗಳಿಗೆ ಆಲೌಟ್ ಆಗಿತ್ತು. </p><p>ಕರ್ನಾಟಕ ಪರ ಅಭಿಲಾಶ್ ಶೆಟ್ಟಿ 4 ವಿಕೆಟ್, ವಿದ್ಯಾದರ್ ಪಾಟೀಲ್ ಹಾಗೂ ಶ್ರೀಶಾ ಆಚಾರ್ ತಲಾ 2 ವಿಕೆಟ್ ಪಡೆದು ಮಿಂಚಿದರು. </p><p>289 ರನ್ ಗುರಿ ಬೆನ್ನಟ್ಟಿದ ಕರ್ನಾಟಕ ತಂಡವು ಉತ್ತಮ ಲಯದಲ್ಲಿದ್ದ ಆರಂಭಿಕ ಆಟಗಾರ ದೇವದತ್ತ ಪಡೀಕ್ಕಲ್(22 ರನ್) ಅವರ ವಿಕೆಟ್ ಅನ್ನು ಬೇಗನೇ ಕಳೆದುಕೊಂಡಿತು. </p><p>ನಾಯಕ ಮಯಂಕ್ ಅಗರವಾಲ್(58 ರನ್), ವಿಕೆಟ್ ಕೀಪರ್ ಬ್ಯಾಟರ್ ಕೃಷ್ಣನ್ ಶ್ರೀಜಿತ್ (77 ರನ್) ಹಾಗೂ ಶ್ರೇಯಸ್ ಗೋಪಾಲ್ (55 ರನ್) ಅರ್ಧಶತಕದ ನೆರವಿನಿಂದ 47.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. </p><p>ತಮಿಳುನಾಡು ವಿರುದ್ಧ 4 ವಿಕೆಟ್ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡವು ಟೂರ್ನಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಗೆದ್ದು, ಟೂರ್ನಿಯಲ್ಲಿ ಅಜೇಯವಾಗಿ ಉಳಿದಿದೆ. </p>.ಟಿ20 ಪಂದ್ಯದಲ್ಲಿ 8 ವಿಕೆಟ್ ಪಡೆಯುವ ಮೂಲಕ ವಿಶ್ವದಾಖಲೆ ಬರೆದ ಭೂತಾನ್ ಆಟಗಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>