<p><strong>ಬೆಂಗಳೂರು:</strong> ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಟೂರ್ನಿಯ ಮೊದಲ ಸೆಮಿಫೈನಲ್ನಲ್ಲಿ ವಿದರ್ಭ ವಿರುದ್ಧ ಸೋಲನುಭವಿಸಿರುವ ಕರ್ನಾಟಕದ ಪ್ರಶಸ್ತಿ ಕನಸು ಭಗ್ನಗೊಂಡಿದೆ. </p><p>ಇಲ್ಲಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಇಂದು (ಗುರುವಾರ) ನಡೆದ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಆರು ವಿಕೆಟ್ ಅಂತರದ ಗೆಲುವು ಸಾಧಿಸಿದ ವಿದರ್ಭ ಫೈನಲ್ಗೆ ಲಗ್ಗೆ ಇಟ್ಟಿದೆ. </p><p>ಇದರೊಂದಿಗೆ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಮಯಂಕ್ ಅಗರವಾಲ್ ಪಡೆ ಸೋಲಿನ ಆಘಾತಕ್ಕೊಳಗಾಗಿದೆ. </p>.Vijay Hazare Trophy| ಮಿಂಚಿದ ಪಡಿಕ್ಕಲ್, ಕರುಣ್: ಸೆಮಿಫೈನಲ್ಗೆ ಕರ್ನಾಟಕ.ರಾಜಸ್ಥಾನ ವಿರುದ್ಧವೂ ಪಡಿಕ್ಕಲ್ ಅಮೋಘ ಬ್ಯಾಟಿಂಗ್: ಹೊಸ ದಾಖಲೆ ಬರೆದ ಕನ್ನಡಿಗ. <p>ಮೊದಲು ಬ್ಯಾಟಿಂಗ್ ಕರ್ನಾಟಕ 49.4 ಓವರ್ಗಳಲ್ಲಿ 280 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. </p><p>ಕರುಣ್ ನಾಯರ್ 76, ಕೃಷ್ಣನ್ ಶ್ರೀಜಿತ್ 54 ರನ್ ಗಳಿಸಿದರು. ಮಯಂಕ್ ಅಗರವಾಲ್ (9) ಹಾಗೂ ದೇವದತ್ತ ಪಡಿಕ್ಕಲ್ (4) ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.</p><p>ಈ ಗುರಿ ಬೆನ್ನಟ್ಟಿದ ವಿದರ್ಭ 46.2 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. </p><p>ಆರಂಭಿಕ ಬ್ಯಾಟರ್ ಮೋಖಾಡೆ ಅಮೋಘ ಶತಕ (138) ಗಳಿಸಿದರೆ ರವಿಕುಮಾರ್ ಸಮರ್ಥ್ 76 ರನ್ ಗಳಿಸಿ ಔಟಾಗದೆ ಉಳಿದರು. ಕರ್ನಾಟಕದ ಪರ ಅಭಿಲಾಷ್ ಶೆಟ್ಟಿ ಮೂರು ವಿಕೆಟ್ ಗಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಟೂರ್ನಿಯ ಮೊದಲ ಸೆಮಿಫೈನಲ್ನಲ್ಲಿ ವಿದರ್ಭ ವಿರುದ್ಧ ಸೋಲನುಭವಿಸಿರುವ ಕರ್ನಾಟಕದ ಪ್ರಶಸ್ತಿ ಕನಸು ಭಗ್ನಗೊಂಡಿದೆ. </p><p>ಇಲ್ಲಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಇಂದು (ಗುರುವಾರ) ನಡೆದ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಆರು ವಿಕೆಟ್ ಅಂತರದ ಗೆಲುವು ಸಾಧಿಸಿದ ವಿದರ್ಭ ಫೈನಲ್ಗೆ ಲಗ್ಗೆ ಇಟ್ಟಿದೆ. </p><p>ಇದರೊಂದಿಗೆ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಮಯಂಕ್ ಅಗರವಾಲ್ ಪಡೆ ಸೋಲಿನ ಆಘಾತಕ್ಕೊಳಗಾಗಿದೆ. </p>.Vijay Hazare Trophy| ಮಿಂಚಿದ ಪಡಿಕ್ಕಲ್, ಕರುಣ್: ಸೆಮಿಫೈನಲ್ಗೆ ಕರ್ನಾಟಕ.ರಾಜಸ್ಥಾನ ವಿರುದ್ಧವೂ ಪಡಿಕ್ಕಲ್ ಅಮೋಘ ಬ್ಯಾಟಿಂಗ್: ಹೊಸ ದಾಖಲೆ ಬರೆದ ಕನ್ನಡಿಗ. <p>ಮೊದಲು ಬ್ಯಾಟಿಂಗ್ ಕರ್ನಾಟಕ 49.4 ಓವರ್ಗಳಲ್ಲಿ 280 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. </p><p>ಕರುಣ್ ನಾಯರ್ 76, ಕೃಷ್ಣನ್ ಶ್ರೀಜಿತ್ 54 ರನ್ ಗಳಿಸಿದರು. ಮಯಂಕ್ ಅಗರವಾಲ್ (9) ಹಾಗೂ ದೇವದತ್ತ ಪಡಿಕ್ಕಲ್ (4) ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.</p><p>ಈ ಗುರಿ ಬೆನ್ನಟ್ಟಿದ ವಿದರ್ಭ 46.2 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. </p><p>ಆರಂಭಿಕ ಬ್ಯಾಟರ್ ಮೋಖಾಡೆ ಅಮೋಘ ಶತಕ (138) ಗಳಿಸಿದರೆ ರವಿಕುಮಾರ್ ಸಮರ್ಥ್ 76 ರನ್ ಗಳಿಸಿ ಔಟಾಗದೆ ಉಳಿದರು. ಕರ್ನಾಟಕದ ಪರ ಅಭಿಲಾಷ್ ಶೆಟ್ಟಿ ಮೂರು ವಿಕೆಟ್ ಗಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>