<p><strong>ಅಹಮದಾಬಾದ್:</strong> ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಗೆಲುವಿನ ಓಟ ಮುಂದುವರಿದಿದ್ದು, ಸತತ ನಾಲ್ಕನೇ ಜಯ ಗಳಿಸಿದೆ. </p><p>ನಾಯಕ ಮಯಂಕ್ ಅಗರವಾಲ್ ಸತತ ಎರಡನೇ ಶತಕದ (100*) ಬಲದಿಂದ ಕರ್ನಾಟಕ ತಂಡವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅರುಣಾಚಲ ಪ್ರದೇಶ ವಿರುದ್ಧ ನಡೆದ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ. </p><p>ವಿ ಕೌಶಿಕ್ (30ಕ್ಕೆ 4) ಹಾಗೂ ಹಾರ್ದಿಕ್ ರಾಜ್ (30ಕ್ಕೆ 4) ದಾಳಿಗೆ ತತ್ತರಿಸಿದ ಅರುಣಾಚಲ ಪ್ರದೇಶ 43.2 ಓವರ್ಗಳಲ್ಲಿ 166 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. </p><p>ಅರುಣಾಚಲದ ಪರ ಏಕಾಂಗಿ ಹೋರಾಟ ತೋರಿದ ಅಭಿನವ್ ಸಿಂಗ್ 71 ರನ್ ಗಳಿಸಿ ಔಟಾಗದೇ ಉಳಿದರು. </p><p>ಈ ಗುರಿ ಬೆನ್ನಟ್ಟಿದ ಕರ್ನಾಟಕ 14.2 ಓವರ್ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು. ಮಯಂಕ್ ಅಗರವಾಲ್ ಕೇವಲ 45 ಎಸೆತಗಳಲ್ಲಿ ಶತಕ ಗಳಿಸಿ ಅಬ್ಬರಿಸಿದರು. </p><p>ಮಯಂಕ್ ಇನಿಂಗ್ಸ್ನಲ್ಲಿ ತಲಾ ಏಳು ಸಿಕ್ಸರ್ ಹಾಗೂ ಬೌಂಡರಿಗಳು ಸೇರಿದ್ದವು. ಮಯಂಕ್ಗೆ ತಕ್ಕ ಸಾಥ್ ನೀಡಿದ ಅಭಿನವ್ ಮನೋಹರ್ 66 ರನ್ ಗಳಿಸಿ ಅಜೇಯರಾಗುಳಿದರು. </p><p>ಇದುವರೆಗೆ ಆಡಿರುವ ಎಲ್ಲ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಕರ್ನಾಟಕ 16 ಅಂಕಗಳೊಂದಿಗೆ 'ಸಿ' ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. </p><p>ಇದಕ್ಕೂ ಮೊದಲು ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅಜೇಯ ಶತಕ ಗಳಿಸಿದ ಮಯಂಕ್ (139*), ಒಂದು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸುವಲ್ಲಿ ನೆರವಾಗಿದ್ದರು. </p>.ವಿಜಯ್ ಹಜಾರೆ ಟ್ರೋಫಿ: ಮಯಂಕ್ ಪಡೆಗೆ ಅರುಣಾಚಲ ಸವಾಲು.ವಿಜಯ್ ಹಜಾರೆ ಟ್ರೋಫಿ: ಮಯಂಕ್ ಶತಕಕ್ಕೆ ಒಲಿದ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ಗೆಲುವಿನ ಓಟ ಮುಂದುವರಿದಿದ್ದು, ಸತತ ನಾಲ್ಕನೇ ಜಯ ಗಳಿಸಿದೆ. </p><p>ನಾಯಕ ಮಯಂಕ್ ಅಗರವಾಲ್ ಸತತ ಎರಡನೇ ಶತಕದ (100*) ಬಲದಿಂದ ಕರ್ನಾಟಕ ತಂಡವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅರುಣಾಚಲ ಪ್ರದೇಶ ವಿರುದ್ಧ ನಡೆದ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ. </p><p>ವಿ ಕೌಶಿಕ್ (30ಕ್ಕೆ 4) ಹಾಗೂ ಹಾರ್ದಿಕ್ ರಾಜ್ (30ಕ್ಕೆ 4) ದಾಳಿಗೆ ತತ್ತರಿಸಿದ ಅರುಣಾಚಲ ಪ್ರದೇಶ 43.2 ಓವರ್ಗಳಲ್ಲಿ 166 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. </p><p>ಅರುಣಾಚಲದ ಪರ ಏಕಾಂಗಿ ಹೋರಾಟ ತೋರಿದ ಅಭಿನವ್ ಸಿಂಗ್ 71 ರನ್ ಗಳಿಸಿ ಔಟಾಗದೇ ಉಳಿದರು. </p><p>ಈ ಗುರಿ ಬೆನ್ನಟ್ಟಿದ ಕರ್ನಾಟಕ 14.2 ಓವರ್ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು. ಮಯಂಕ್ ಅಗರವಾಲ್ ಕೇವಲ 45 ಎಸೆತಗಳಲ್ಲಿ ಶತಕ ಗಳಿಸಿ ಅಬ್ಬರಿಸಿದರು. </p><p>ಮಯಂಕ್ ಇನಿಂಗ್ಸ್ನಲ್ಲಿ ತಲಾ ಏಳು ಸಿಕ್ಸರ್ ಹಾಗೂ ಬೌಂಡರಿಗಳು ಸೇರಿದ್ದವು. ಮಯಂಕ್ಗೆ ತಕ್ಕ ಸಾಥ್ ನೀಡಿದ ಅಭಿನವ್ ಮನೋಹರ್ 66 ರನ್ ಗಳಿಸಿ ಅಜೇಯರಾಗುಳಿದರು. </p><p>ಇದುವರೆಗೆ ಆಡಿರುವ ಎಲ್ಲ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಕರ್ನಾಟಕ 16 ಅಂಕಗಳೊಂದಿಗೆ 'ಸಿ' ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. </p><p>ಇದಕ್ಕೂ ಮೊದಲು ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅಜೇಯ ಶತಕ ಗಳಿಸಿದ ಮಯಂಕ್ (139*), ಒಂದು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸುವಲ್ಲಿ ನೆರವಾಗಿದ್ದರು. </p>.ವಿಜಯ್ ಹಜಾರೆ ಟ್ರೋಫಿ: ಮಯಂಕ್ ಪಡೆಗೆ ಅರುಣಾಚಲ ಸವಾಲು.ವಿಜಯ್ ಹಜಾರೆ ಟ್ರೋಫಿ: ಮಯಂಕ್ ಶತಕಕ್ಕೆ ಒಲಿದ ಜಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>