‘ನಾನು ಆರ್ಸಿಬಿ ಫ್ರಾಂಚೈಸ್ಗಾಗಿ ಮತ್ತು ವಿರಾಟ್ ಕೊಹ್ಲಿಗಾಗಿ ಬಿಡ್ ಮಾಡಿದಾಗ ಇವಕ್ಕಿಂತ ಉತ್ತಮ ಆಯ್ಕೆಗಳನ್ನು ಮಾಡಲಾಗುತ್ತಿರಲಿಲ್ಲ ಎಂದು ನನ್ನ ಒಳಮನಸ್ಸು ಹೇಳುತ್ತಿತ್ತು. ಈಗ ನನ್ನ ಒಳಮನಸ್ಸು ಹೇಳುತ್ತಿದೆ ಆರ್ಸಿಬಿಗೆ ಕಪ್ ಗೆಲ್ಲುವ ಅತ್ಯುತ್ತಮ ಅವಕಾಶವಿದೆ ಎಂದು. ಮುನ್ನುಗ್ಗಿ, ಬೆಸ್ಟ್ ಆಫ್ ಲಕ್ ’ಎಂದು ಮಲ್ಯ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಚೆನ್ನೈ ವಿರುದ್ಧದ ಅಂತಿಮ ಲೀಗ್ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿ ಆರ್ಸಿಬಿ ಪ್ಲೇ ಆಫ್ ಹಂತ ತಲುಪಿದಾಗಲೂ ಮಲ್ಯ ಶುಭಾಶಯ ತಿಳಿಸಿದ್ದರು. ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸುವ ಮೂಲಕ ಐಪಿಎಲ್ ಪ್ಲೇ ಆಫ್ ತಲುಪಿದ ಆರ್ಸಿಬಿಗೆ ಹೃದಯಪೂರ್ವಕ ಶುಭಾಶಯಗಳು. ಅತ್ಯಂತ ನಿರಾಶಾದಾಯಕ ಆರಂಭದ ಬಳಿಕ ಛಲ ಮತ್ತು ಕೌಶಲ್ಯದಿಂದ ಕೂಡಿದ ಆಟದಿಂದ ತಂಡ ಜಯದ ಹಳಿಗೆ ಮರಳಲು ಸಾಧ್ಯವಾಗಿದೆ. ಟ್ರೋಫಿಯ ಮತ್ತಷ್ಟು ಸನಿಹಕ್ಕೆ ಬಂದಿದೆ’ ಎಂದು ಹೇಳಿದ್ದರು.
ಆರ್ಸಿಬಿ ಟ್ರೋಫಿ ಎತ್ತಿಹಿಡಿಯಲು 3 ಜಯದ ಅಗತ್ಯವಿದೆ. ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದರೆ, ಚೆನ್ನೈನಲ್ಲಿ ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಲಿದೆ. ಅಲ್ಲಿಯೂ ಗೆಲುವು ಸಿಕ್ಕರೆ, ಫೈನಲ್ನಲ್ಲಿ ಕೋಲ್ಕತ್ತ ತಂಡ ಎದುರಾಗಲಿದೆ.