ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಏಕದಿನ ಪಂದ್ಯಗಳನ್ನು ಆಡುತ್ತಿದೆ. ಕಾಫಿ ವಿತ್ ಕರಣ್ಟಿವಿ ಸೆಲೆಬ್ರಿಟಿ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್.ರಾಹುಲ್ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ಪೂರ್ಣಗೊಳ್ಳುವವರೆಗೂ ಅವರನ್ನು ತಂಡದಿಂದ ಅಮಾನತು ಮಾಡಲಾಗಿದ್ದು, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪಂದ್ಯಗಳಲ್ಲಿ ಆಡಲು ವಿಜಯ್ ಶಂಕರ್ ಹಾಗೂ ಶುಬಮನ್ ಗಿಲ್ ಅವಕಾಶ ಪಡೆದಿದ್ದಾರೆ.