<p><strong>ಬೆಂಗಳೂರು</strong>: ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಬಿ. ವಿಜಯಕೃಷ್ಣ (71) ಗುರುವಾರ ಬೆಳಗಿನ ಜಾವ ನಿಧನರಾದರು. ಬಹು ಅಂಗಾಂಗಗಳ ವೈಫಲ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಎಡಗೈ ಸ್ಪಿನ್ನರ್ ಮತ್ತು ಬ್ಯಾಟ್ಸ್ಮನ್ ಆಗಿದ್ದ ವಿಜಯಕೃಷ್ಣ ಅವರು 1968 ರಿಂದ 1984ರವರೆಗೆ ಕರ್ನಾಟಕ ತಂಡದಲ್ಲಿ ಆಡಿದ್ದರು. 80 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದ ವಿಜಯಕೃಷ್ಣ 2297 ರನ್ಗಳನ್ನು ಗಳಿಸಿದ್ಧಾರೆ. ಅದರಲ್ಲಿ ಎರಡು ಶತಕಗಳಿವೆ. 194 ವಿಕೆಟ್ಗಳನ್ನೂ ಗಳಿಸಿದ್ದಾರೆ.</p>.<p>ಇ.ಎ.ಎಸ್. ಪ್ರಸನ್ನ, ಬಿ.ಎಸ್. ಚಂದ್ರಶೇಖರ್, ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್ ಅವರ ಸಮಕಾಲೀನ ಆಟಗಾರರಾಗಿದ್ದ ವಿಜಯಕೃಷ್ಣ, ಕರ್ನಾಟಕ ತಂಡವು 1973–74ರಲ್ಲಿ ಮೊದಲ ಸಲ ರಣಜಿ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.</p>.<p>ವಿಜಯ್ ಕೃಷ್ಣ ಬೆಂಗಳೂರಿನ ಕುಮಾರ ಪಾರ್ಕ್ನಲ್ಲಿ ವಾಸಿಸುತ್ತಿದ್ದರು.ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ 4 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಬಿ. ವಿಜಯಕೃಷ್ಣ (71) ಗುರುವಾರ ಬೆಳಗಿನ ಜಾವ ನಿಧನರಾದರು. ಬಹು ಅಂಗಾಂಗಗಳ ವೈಫಲ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಎಡಗೈ ಸ್ಪಿನ್ನರ್ ಮತ್ತು ಬ್ಯಾಟ್ಸ್ಮನ್ ಆಗಿದ್ದ ವಿಜಯಕೃಷ್ಣ ಅವರು 1968 ರಿಂದ 1984ರವರೆಗೆ ಕರ್ನಾಟಕ ತಂಡದಲ್ಲಿ ಆಡಿದ್ದರು. 80 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದ ವಿಜಯಕೃಷ್ಣ 2297 ರನ್ಗಳನ್ನು ಗಳಿಸಿದ್ಧಾರೆ. ಅದರಲ್ಲಿ ಎರಡು ಶತಕಗಳಿವೆ. 194 ವಿಕೆಟ್ಗಳನ್ನೂ ಗಳಿಸಿದ್ದಾರೆ.</p>.<p>ಇ.ಎ.ಎಸ್. ಪ್ರಸನ್ನ, ಬಿ.ಎಸ್. ಚಂದ್ರಶೇಖರ್, ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್ ಅವರ ಸಮಕಾಲೀನ ಆಟಗಾರರಾಗಿದ್ದ ವಿಜಯಕೃಷ್ಣ, ಕರ್ನಾಟಕ ತಂಡವು 1973–74ರಲ್ಲಿ ಮೊದಲ ಸಲ ರಣಜಿ ಟ್ರೋಫಿ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.</p>.<p>ವಿಜಯ್ ಕೃಷ್ಣ ಬೆಂಗಳೂರಿನ ಕುಮಾರ ಪಾರ್ಕ್ನಲ್ಲಿ ವಾಸಿಸುತ್ತಿದ್ದರು.ಮೃತರ ಅಂತ್ಯಕ್ರಿಯೆಯು ಗುರುವಾರ ಸಂಜೆ 4 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>