<p><strong>ಠಾಣೆ:</strong> ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದು, ಇಲ್ಲಿನ ಭೀವಂಡಿಯಲ್ಲಿರುವ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p><p>ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಾಂಬ್ಳಿ, ಬುಧವಾರ ಸಂಜೆ 4ರ ಸುಮಾರಿಗೆ ಆಸ್ಪತ್ರೆಯಿಂದ ತೆರಳಿದ್ದಾರೆ.</p><p>ಆಸ್ಪತ್ರೆಯಿಂದ ಹೊರನಡೆಯುವಾಗ ಅವರು ಟೀಂ ಇಂಡಿಯಾ ಜೆರ್ಸಿ ತೊಟ್ಟು, ಬ್ಯಾಟ್ ಹಿಡಿದುಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಮೂತ್ರನಾಳದ ಸೋಂಕು ಮತ್ತು ಸ್ನಾಯು ಸೆಳೆತದಿಂದ ಬಳಲುತ್ತಿದ್ದ 52 ವರ್ಷದ ಕಾಂಬ್ಳಿ ಅವರನ್ನು ಡಿಸೆಂಬರ್ 21ರಂದು ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದನ್ನು ನಂತರ ಕಂಡುಬಂದಿತ್ತು.</p><p>ಮನೆಗೆ ತೆರಳುವಾಗ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಬ್ಳಿ, ಹೊಸ ವರ್ಷದ ಸಂದೇಶ ಹಂಚಿಕೊಂಡಿದ್ದಾರೆ. 'ದುಶ್ಚಟಗಳು ಜೀವನವನ್ನು ನಾಶಮಾಡುತ್ತವೆ' ಎಂದಿರುವ ಅವರು, ಮದ್ಯ ಹಾಗೂ ಮಾದಕ ದ್ರವ್ಯಗಳಿಂದ ದೂರವಿರುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.</p>.ಆಸಿಸ್ ಎದುರಿನ ಅಂತಿಮ ಟೆಸ್ಟ್ನಲ್ಲಿ ಆಡುವರೇ ರೋಹಿತ್?: ಖಚಿತಪಡಿಸದ ಟೀಂ ಇಂಡಿಯಾ.AUS vs IND | ಭಾರತದ ಎದುರು ಕಳಪೆ ಆಟ; ಮಾರ್ಷ್ಗೆ ಕೋಕ್, ಹೊಸಬರಿಗೆ ಆಸಿಸ್ ಮಣೆ.<p>ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ವಿವೇಕ್ ತ್ರಿವೇದಿ ಅವರು, 'ಕಾಂಬ್ಳಿ ಸಂಪೂರ್ಣ ಗುಣಮುಖರಾಗಿದ್ದಾರೆ. ಅವರು ಒಂದಿಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ' ಎಂದು ತಿಳಿಸಿದ್ದಾರೆ.</p><p>ಕಾಂಬ್ಳಿ ಆಸ್ಪತ್ರೆಯಲ್ಲಿದ್ದಾಗ ನೃತ್ಯ ಮಾಡಿದ ವಿಡಿಯೊ ಎರಡು ದಿನಗಳ ಹಿಂದೆ ಸದ್ದು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದು, ಇಲ್ಲಿನ ಭೀವಂಡಿಯಲ್ಲಿರುವ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p><p>ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಾಂಬ್ಳಿ, ಬುಧವಾರ ಸಂಜೆ 4ರ ಸುಮಾರಿಗೆ ಆಸ್ಪತ್ರೆಯಿಂದ ತೆರಳಿದ್ದಾರೆ.</p><p>ಆಸ್ಪತ್ರೆಯಿಂದ ಹೊರನಡೆಯುವಾಗ ಅವರು ಟೀಂ ಇಂಡಿಯಾ ಜೆರ್ಸಿ ತೊಟ್ಟು, ಬ್ಯಾಟ್ ಹಿಡಿದುಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.</p><p>ಮೂತ್ರನಾಳದ ಸೋಂಕು ಮತ್ತು ಸ್ನಾಯು ಸೆಳೆತದಿಂದ ಬಳಲುತ್ತಿದ್ದ 52 ವರ್ಷದ ಕಾಂಬ್ಳಿ ಅವರನ್ನು ಡಿಸೆಂಬರ್ 21ರಂದು ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದನ್ನು ನಂತರ ಕಂಡುಬಂದಿತ್ತು.</p><p>ಮನೆಗೆ ತೆರಳುವಾಗ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಬ್ಳಿ, ಹೊಸ ವರ್ಷದ ಸಂದೇಶ ಹಂಚಿಕೊಂಡಿದ್ದಾರೆ. 'ದುಶ್ಚಟಗಳು ಜೀವನವನ್ನು ನಾಶಮಾಡುತ್ತವೆ' ಎಂದಿರುವ ಅವರು, ಮದ್ಯ ಹಾಗೂ ಮಾದಕ ದ್ರವ್ಯಗಳಿಂದ ದೂರವಿರುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.</p>.ಆಸಿಸ್ ಎದುರಿನ ಅಂತಿಮ ಟೆಸ್ಟ್ನಲ್ಲಿ ಆಡುವರೇ ರೋಹಿತ್?: ಖಚಿತಪಡಿಸದ ಟೀಂ ಇಂಡಿಯಾ.AUS vs IND | ಭಾರತದ ಎದುರು ಕಳಪೆ ಆಟ; ಮಾರ್ಷ್ಗೆ ಕೋಕ್, ಹೊಸಬರಿಗೆ ಆಸಿಸ್ ಮಣೆ.<p>ಅವರಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ವಿವೇಕ್ ತ್ರಿವೇದಿ ಅವರು, 'ಕಾಂಬ್ಳಿ ಸಂಪೂರ್ಣ ಗುಣಮುಖರಾಗಿದ್ದಾರೆ. ಅವರು ಒಂದಿಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ' ಎಂದು ತಿಳಿಸಿದ್ದಾರೆ.</p><p>ಕಾಂಬ್ಳಿ ಆಸ್ಪತ್ರೆಯಲ್ಲಿದ್ದಾಗ ನೃತ್ಯ ಮಾಡಿದ ವಿಡಿಯೊ ಎರಡು ದಿನಗಳ ಹಿಂದೆ ಸದ್ದು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>