<p><strong>ಸೌತಾಂಪ್ಟನ್ (ಪಿಟಿಐ): </strong>ವಿಶ್ವಕಪ್ನಲ್ಲಿ ಶುಭಾರಂಭ ಮಾಡುವ ಹುಮ್ಮಸ್ಸಿನಲ್ಲಿರುವ ಭಾರತ ತಂಡಕ್ಕೆ ಆರಂಭದಲ್ಲೇ ವಿಘ್ನಗಳು ಎದುರಾಗುತ್ತಿವೆ.</p>.<p>ಶನಿವಾರ ಏಜೀಲ್ ಬೌಲ್ನಲ್ಲಿ ಅಭ್ಯಾಸ ನಡೆಸುವ ವೇಳೆ ನಾಯಕ ವಿರಾಟ್ ಕೊಹ್ಲಿ ಅವರ ಬಲಗೈ ಹೆಬ್ಬೆರಳಿಗೆ ಬಲವಾದ ಪೆಟ್ಟು ಬಿದ್ದಿದೆ.</p>.<p>ತಕ್ಷಣವೇ ಅಂಗಳಕ್ಕೆ ಧಾವಿಸಿದ ಫಿಸಿಯೊ ಪ್ಯಾಟ್ರಿಕ್ ಫರ್ಹಾತ್, ಹೆಬ್ಬೆರಳಿಗೆ ನೋವು ನಿವಾರಕವನ್ನು (ಮ್ಯಾಜಿಕ್ ಸ್ಪ್ರೇ) ಹಾಕಿದರು. ಬಳಿಕ ಗಾಯಗೊಂಡ ಭಾಗಕ್ಕೆ ಟೇಪ್ ಸುತ್ತಿದರು.</p>.<p>ನಂತರ ಕೊಹ್ಲಿ, ಹಿಮಗಡ್ಡೆ ತುಂಬಿದ್ದ ಪ್ಲಾಸ್ಟಿಕ್ ಲೋಟದಲ್ಲಿ ಹೆಬ್ಬೆರಳು ಅದ್ದಿಕೊಂಡು ಅಂಗಳ ತೊರೆದ ದೃಶ್ಯ ಕಂಡುಬಂತು.</p>.<p>ಇದಕ್ಕೂ ಮುನ್ನ ಆಲ್ರೌಂಡರ್ ವಿಜಯ್ ಶಂಕರ್ ಅವರು ಮೊಣಕೈ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ನ್ಯೂಜಿಲೆಂಡ್ ಎದುರಿನ ಅಭ್ಯಾಸ ಪಂದ್ಯದಿಂದ ಹಿಂದೆ ಸರಿದಿದ್ದರು.</p>.<p>ಗಾಯದಿಂದ ಚೇತರಿಸಿಕೊಂಡಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಕೇದಾರ್ ಜಾಧವ್, ಶನಿವಾರ ನೆಟ್ಸ್ನಲ್ಲಿ ಸಾಕಷ್ಟು ಹೊತ್ತು ಬೆವರು ಹರಿಸಿದರು. ಇತರ ಆಟಗಾರರೂ ತಾಲೀಮಿನಲ್ಲಿ ಭಾಗಿಯಾಗಿದ್ದರು. ಭಾನುವಾರ ಕೊಹ್ಲಿ ಬಳಗವು ಅಭ್ಯಾಸದಿಂದ ದೂರ ಉಳಿಯಿತು.</p>.<p>ಜೂನ್ 5ರಂದು ನಡೆಯುವ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ಸವಾಲು ಎದುರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೌತಾಂಪ್ಟನ್ (ಪಿಟಿಐ): </strong>ವಿಶ್ವಕಪ್ನಲ್ಲಿ ಶುಭಾರಂಭ ಮಾಡುವ ಹುಮ್ಮಸ್ಸಿನಲ್ಲಿರುವ ಭಾರತ ತಂಡಕ್ಕೆ ಆರಂಭದಲ್ಲೇ ವಿಘ್ನಗಳು ಎದುರಾಗುತ್ತಿವೆ.</p>.<p>ಶನಿವಾರ ಏಜೀಲ್ ಬೌಲ್ನಲ್ಲಿ ಅಭ್ಯಾಸ ನಡೆಸುವ ವೇಳೆ ನಾಯಕ ವಿರಾಟ್ ಕೊಹ್ಲಿ ಅವರ ಬಲಗೈ ಹೆಬ್ಬೆರಳಿಗೆ ಬಲವಾದ ಪೆಟ್ಟು ಬಿದ್ದಿದೆ.</p>.<p>ತಕ್ಷಣವೇ ಅಂಗಳಕ್ಕೆ ಧಾವಿಸಿದ ಫಿಸಿಯೊ ಪ್ಯಾಟ್ರಿಕ್ ಫರ್ಹಾತ್, ಹೆಬ್ಬೆರಳಿಗೆ ನೋವು ನಿವಾರಕವನ್ನು (ಮ್ಯಾಜಿಕ್ ಸ್ಪ್ರೇ) ಹಾಕಿದರು. ಬಳಿಕ ಗಾಯಗೊಂಡ ಭಾಗಕ್ಕೆ ಟೇಪ್ ಸುತ್ತಿದರು.</p>.<p>ನಂತರ ಕೊಹ್ಲಿ, ಹಿಮಗಡ್ಡೆ ತುಂಬಿದ್ದ ಪ್ಲಾಸ್ಟಿಕ್ ಲೋಟದಲ್ಲಿ ಹೆಬ್ಬೆರಳು ಅದ್ದಿಕೊಂಡು ಅಂಗಳ ತೊರೆದ ದೃಶ್ಯ ಕಂಡುಬಂತು.</p>.<p>ಇದಕ್ಕೂ ಮುನ್ನ ಆಲ್ರೌಂಡರ್ ವಿಜಯ್ ಶಂಕರ್ ಅವರು ಮೊಣಕೈ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ನ್ಯೂಜಿಲೆಂಡ್ ಎದುರಿನ ಅಭ್ಯಾಸ ಪಂದ್ಯದಿಂದ ಹಿಂದೆ ಸರಿದಿದ್ದರು.</p>.<p>ಗಾಯದಿಂದ ಚೇತರಿಸಿಕೊಂಡಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಕೇದಾರ್ ಜಾಧವ್, ಶನಿವಾರ ನೆಟ್ಸ್ನಲ್ಲಿ ಸಾಕಷ್ಟು ಹೊತ್ತು ಬೆವರು ಹರಿಸಿದರು. ಇತರ ಆಟಗಾರರೂ ತಾಲೀಮಿನಲ್ಲಿ ಭಾಗಿಯಾಗಿದ್ದರು. ಭಾನುವಾರ ಕೊಹ್ಲಿ ಬಳಗವು ಅಭ್ಯಾಸದಿಂದ ದೂರ ಉಳಿಯಿತು.</p>.<p>ಜೂನ್ 5ರಂದು ನಡೆಯುವ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ಸವಾಲು ಎದುರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>