<p><strong>ನವದೆಹಲಿ:</strong> ಕೊರೊನಾ ವೈರಸ್ನಿಂದ ರಕ್ಷಿಸಿಕೊಳ್ಳಲು ಸ್ವಯಂ ಪ್ರತ್ಯೇಕವಾಸವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಡೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ.</p>.<p>ಟ್ವಿಟರ್ನಲ್ಲಿ ಈಕುರಿತು ವಿಡಿಯೊ ಹಾಕಿರುವ ತಾರಾ ದಂಪತಿಯು ಕೊರೊನಾ ವಿರುದ್ಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.</p>.<p>‘ಸದ್ಯ ನಾವೆಲ್ಲರೂ ಅತ್ಯಂತ ಕಠಿಣ ಸಮಯವನ್ನು ಎದುರಿಸುತ್ತಿದ್ದೇವೆ. ಕೊರೊನಾ ವೈರಸ್ನ ಹರಡುವಿಕೆಯನ್ನು ತಡೆಯಲು ಮುಂಜಾಗ್ರತೆಯೊಂದೇ ಪರಿಹಾರವಾಗಿದೆ. ಅದಕ್ಕಾಗಿ ನಾವೆಲ್ಲರೂ ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು. ಪ್ರತ್ಯೇಕವಾಗಿ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಂಡು ಇದ್ದರೆ, ನಾವು ಮತ್ತು ಸಮಾಜಕ್ಕೆ ಒಳಿತು’ ಎಂದು ವಿರಾಟ್ ಹೇಳಿದ್ದಾರೆ.</p>.<p>‘ವೈರಸ್ ಇನ್ನಷ್ಟು ಹರಡುವುದನ್ನು ತಡೆಗಟ್ಟಲು ಎಲ್ಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಅನುಷ್ಕಾ ಹೇಳಿದ್ದಾರೆ. ಇದೇ ಭಾನುವಾರ ಜನತಾ ಕರ್ಫ್ಯೂ ಆಚರಿಸುವಂತೆ ಪ್ರಧಾನಿ ಮೋದಿಯವರು ನೀಡಿರುವ ಕರೆಯನ್ನೂ ವಿರಾಟ್ ಮತ್ತು ಅನುಷ್ಕಾ ಬೆಂಬಲಿಸಿದ್ದಾರೆ.</p>.<p>ಇದಕ್ಕೆ ಹಲವು ಕ್ರೀಡಾ ದಿಗ್ಗಜರೂ ದನಿಗೂಡಿಸಿದ್ದಾರೆ. ಭಾರತ ತಂಡದ ಕೋಚ್ ರವಿಶಾಸ್ತ್ರಿ, ಆಟಗಾರ ಶಿಖರ್ ಧವನ್, ಆರ್. ಅಶ್ವಿನ್ ಮತ್ತು ಹರಭಜನ್ ಸಿಂಗ್ ಅವರೂ ಜನತಾ ಕರ್ಫ್ಯೂ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ವೈರಸ್ನಿಂದ ರಕ್ಷಿಸಿಕೊಳ್ಳಲು ಸ್ವಯಂ ಪ್ರತ್ಯೇಕವಾಸವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಡೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ.</p>.<p>ಟ್ವಿಟರ್ನಲ್ಲಿ ಈಕುರಿತು ವಿಡಿಯೊ ಹಾಕಿರುವ ತಾರಾ ದಂಪತಿಯು ಕೊರೊನಾ ವಿರುದ್ಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.</p>.<p>‘ಸದ್ಯ ನಾವೆಲ್ಲರೂ ಅತ್ಯಂತ ಕಠಿಣ ಸಮಯವನ್ನು ಎದುರಿಸುತ್ತಿದ್ದೇವೆ. ಕೊರೊನಾ ವೈರಸ್ನ ಹರಡುವಿಕೆಯನ್ನು ತಡೆಯಲು ಮುಂಜಾಗ್ರತೆಯೊಂದೇ ಪರಿಹಾರವಾಗಿದೆ. ಅದಕ್ಕಾಗಿ ನಾವೆಲ್ಲರೂ ಸಾಧ್ಯವಾದಷ್ಟು ಮನೆಯಲ್ಲಿಯೇ ಇರಬೇಕು. ಪ್ರತ್ಯೇಕವಾಗಿ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಂಡು ಇದ್ದರೆ, ನಾವು ಮತ್ತು ಸಮಾಜಕ್ಕೆ ಒಳಿತು’ ಎಂದು ವಿರಾಟ್ ಹೇಳಿದ್ದಾರೆ.</p>.<p>‘ವೈರಸ್ ಇನ್ನಷ್ಟು ಹರಡುವುದನ್ನು ತಡೆಗಟ್ಟಲು ಎಲ್ಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಅನುಷ್ಕಾ ಹೇಳಿದ್ದಾರೆ. ಇದೇ ಭಾನುವಾರ ಜನತಾ ಕರ್ಫ್ಯೂ ಆಚರಿಸುವಂತೆ ಪ್ರಧಾನಿ ಮೋದಿಯವರು ನೀಡಿರುವ ಕರೆಯನ್ನೂ ವಿರಾಟ್ ಮತ್ತು ಅನುಷ್ಕಾ ಬೆಂಬಲಿಸಿದ್ದಾರೆ.</p>.<p>ಇದಕ್ಕೆ ಹಲವು ಕ್ರೀಡಾ ದಿಗ್ಗಜರೂ ದನಿಗೂಡಿಸಿದ್ದಾರೆ. ಭಾರತ ತಂಡದ ಕೋಚ್ ರವಿಶಾಸ್ತ್ರಿ, ಆಟಗಾರ ಶಿಖರ್ ಧವನ್, ಆರ್. ಅಶ್ವಿನ್ ಮತ್ತು ಹರಭಜನ್ ಸಿಂಗ್ ಅವರೂ ಜನತಾ ಕರ್ಫ್ಯೂ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>