<p><strong>ವಡೋದರ:</strong> ಇಲ್ಲಿ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯದಲ್ಲಿ 93 ರನ್ ಗಳಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. </p><p>ಪಂದ್ಯದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಅವರು, ಅಭಿಮಾನಿಗಳ ಕ್ರೇಜ್ನಿಂದ ಆಗುತ್ತಿರುವ ವಿಶಿಷ್ಟ ಸಮಸ್ಯೆಯೊಂದರ ಕುರಿತು ಮಾತನಾಡಿದರು. ಇದೇ ಸಮಸ್ಯೆ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಚಾರದಲ್ಲೂ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p><p>301 ರನ್ ಚೇಸ್ ಮಾಡುವ ಸಂದರ್ಭದಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ ಅವರು 26 ರನ್ ಗಳಿಸಿ ಔಟ್ ಆಗುತ್ತಾರೆ. ಈ ವೇಳೆ, ಕ್ರೀಡಾಂಗಣದಲ್ಲಿ ನೆರದಿದ್ದ ಪ್ರೇಕ್ಷಕರು ಶಿಳ್ಳೆ, ಚಪ್ಪಾಳೆ, ಕೇಕೆ ಹಾಕುವ ಮೂಲಕ ಸಂಭ್ರಮಿಸುತ್ತಾರೆ. ಕಾರಣ, ವಿರಾಟ್ ಕೊಹ್ಲಿ ಬ್ಯಾಟಿಂಗ್ ಬರುತ್ತಾರೆ ಎಂದು. ಕೊಹ್ಲಿಯವರು ಅಭಿಮಾನಿಗಳ ಈ ಅತಿರೇಕದ ಅಭಿಮಾನಕ್ಕೆ ಬೇಸರ ಹೊರಹಾಕಿದ್ದಾರೆ. </p><p>ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿಯವರಿಗೆ ಅಭಿಮಾನಿಗಳ ಹರ್ಷೋದ್ಗಾರದ ಕುರಿತು ಏನು ಹೇಳುತ್ತೀರಾ? ಎಂದು ಪ್ರಶ್ನಿಸಲಾಯಿತು. ಇದಕ್ಕೆ ಉತ್ತರಿಸಿದ ವಿರಾಟ್, ‘ಇಷ್ಟೊಂದು ಪ್ರೀತಿ ಕೊಡುತ್ತಿರುವುದಕ್ಕೆ ಧನ್ಯವಾದಗಳು. ಆದರೆ, ಭಾರತ ತಂಡದ ವಿಕೆಟ್ ಬಿದ್ದಾಗ ಸಂಭ್ರಮಿಸುವುದು ನನಗೆ ಇಷ್ಟವಾಗುವುದಿಲ್ಲ’ ಎಂದರು. </p>.IPL Auction 2026 | ಜ್ಯೂ. ಜಡೇಜ, ಧೋನಿ ಸೇರಿ CSK ಹೊಸ ತಂಡದ ಪಟ್ಟಿ ಹೀಗಿದೆ.IND vs NZ: ವಿರಾಟ್ ಕೊಹ್ಲಿ ಆರ್ಭಟ, ಭಾರತ ಶುಭಾರಂಭ.<p>‘ಭಾರತದ ಮೊದಲ ವಿಕೆಟ್ ಬಿದ್ದಾಗ ಎಲ್ಲರೂ ಖಷಿಯಿಂದ ಬೊಬ್ಬೆ ಹೊಡೆಯುತ್ತಾರೆ. ಅದು, ಔಟ್ ಆಗಿ ಹೋಗುವವರಿಗೆ ಬೇಸರ ತರಿಸಬಹುದು. ಎಂ.ಎಸ್. ಧೋನಿ ವಿಚಾರದಲ್ಲೂ ಇದೇ ತರ ಆಗಿರುವುದನ್ನು ನಾನು ನೋಡಿದ್ದೇನೆ. ಈ ವಿಚಾರಕ್ಕೆ ನನಗೆ ಬೇಸರವಿದೆ’ ಎಂದು ಅಭಿಮಾನಿಗಳ ಅತಿರೇಕದ ಪ್ರೀತಿಗೆ ವಿರಾಟ್ ಕೊಹ್ಲಿಯವರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡೋದರ:</strong> ಇಲ್ಲಿ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1–0 ಮುನ್ನಡೆ ಕಾಯ್ದುಕೊಂಡಿದೆ. ಪಂದ್ಯದಲ್ಲಿ 93 ರನ್ ಗಳಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. </p><p>ಪಂದ್ಯದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಅವರು, ಅಭಿಮಾನಿಗಳ ಕ್ರೇಜ್ನಿಂದ ಆಗುತ್ತಿರುವ ವಿಶಿಷ್ಟ ಸಮಸ್ಯೆಯೊಂದರ ಕುರಿತು ಮಾತನಾಡಿದರು. ಇದೇ ಸಮಸ್ಯೆ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಚಾರದಲ್ಲೂ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. </p><p>301 ರನ್ ಚೇಸ್ ಮಾಡುವ ಸಂದರ್ಭದಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ ಅವರು 26 ರನ್ ಗಳಿಸಿ ಔಟ್ ಆಗುತ್ತಾರೆ. ಈ ವೇಳೆ, ಕ್ರೀಡಾಂಗಣದಲ್ಲಿ ನೆರದಿದ್ದ ಪ್ರೇಕ್ಷಕರು ಶಿಳ್ಳೆ, ಚಪ್ಪಾಳೆ, ಕೇಕೆ ಹಾಕುವ ಮೂಲಕ ಸಂಭ್ರಮಿಸುತ್ತಾರೆ. ಕಾರಣ, ವಿರಾಟ್ ಕೊಹ್ಲಿ ಬ್ಯಾಟಿಂಗ್ ಬರುತ್ತಾರೆ ಎಂದು. ಕೊಹ್ಲಿಯವರು ಅಭಿಮಾನಿಗಳ ಈ ಅತಿರೇಕದ ಅಭಿಮಾನಕ್ಕೆ ಬೇಸರ ಹೊರಹಾಕಿದ್ದಾರೆ. </p><p>ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿಯವರಿಗೆ ಅಭಿಮಾನಿಗಳ ಹರ್ಷೋದ್ಗಾರದ ಕುರಿತು ಏನು ಹೇಳುತ್ತೀರಾ? ಎಂದು ಪ್ರಶ್ನಿಸಲಾಯಿತು. ಇದಕ್ಕೆ ಉತ್ತರಿಸಿದ ವಿರಾಟ್, ‘ಇಷ್ಟೊಂದು ಪ್ರೀತಿ ಕೊಡುತ್ತಿರುವುದಕ್ಕೆ ಧನ್ಯವಾದಗಳು. ಆದರೆ, ಭಾರತ ತಂಡದ ವಿಕೆಟ್ ಬಿದ್ದಾಗ ಸಂಭ್ರಮಿಸುವುದು ನನಗೆ ಇಷ್ಟವಾಗುವುದಿಲ್ಲ’ ಎಂದರು. </p>.IPL Auction 2026 | ಜ್ಯೂ. ಜಡೇಜ, ಧೋನಿ ಸೇರಿ CSK ಹೊಸ ತಂಡದ ಪಟ್ಟಿ ಹೀಗಿದೆ.IND vs NZ: ವಿರಾಟ್ ಕೊಹ್ಲಿ ಆರ್ಭಟ, ಭಾರತ ಶುಭಾರಂಭ.<p>‘ಭಾರತದ ಮೊದಲ ವಿಕೆಟ್ ಬಿದ್ದಾಗ ಎಲ್ಲರೂ ಖಷಿಯಿಂದ ಬೊಬ್ಬೆ ಹೊಡೆಯುತ್ತಾರೆ. ಅದು, ಔಟ್ ಆಗಿ ಹೋಗುವವರಿಗೆ ಬೇಸರ ತರಿಸಬಹುದು. ಎಂ.ಎಸ್. ಧೋನಿ ವಿಚಾರದಲ್ಲೂ ಇದೇ ತರ ಆಗಿರುವುದನ್ನು ನಾನು ನೋಡಿದ್ದೇನೆ. ಈ ವಿಚಾರಕ್ಕೆ ನನಗೆ ಬೇಸರವಿದೆ’ ಎಂದು ಅಭಿಮಾನಿಗಳ ಅತಿರೇಕದ ಪ್ರೀತಿಗೆ ವಿರಾಟ್ ಕೊಹ್ಲಿಯವರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>