<p><strong>ಬೆಂಗಳೂರು:</strong> ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಿನ್ನೆ (ಏಪ್ರಿಲ್ 15) ನಡೆದ ಐಪಿಎಲ್ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಖನೌ ಸೂಪರ್ ಜೈಂಟ್ಸ್ ಅನ್ನು ಸುಲಭವಾಗಿ ಮಣಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.</p><p>ಈ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಅವರು ಆರ್ಸಿಬಿ ಪರ ಗರಿಷ್ಠ ರನ್ ಸ್ಕೋರರ್ ಆದರು. ಅವರು 34 ಎಸೆತಗಳಲ್ಲಿ 49 ರನ್ ಬಾರಿಸಿದರು. ಮಾತ್ರವಲ್ಲ, ಈ ಬಾರಿಯ ಐಪಿಎಲ್ನಲ್ಲಿ ಆರೆಂಜ್ ಕ್ಯಾಪ್ ರೇಸ್ನಲ್ಲಿ ಅಗ್ರಸ್ಥಾನಕ್ಕೇರಿದರು.</p><p>ಕಳೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅವರಿಗೆ ಮೊಣಕಾಲಿನ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಮೈದಾನದಿಂದ ಹೊರಗುಳಿದಿದ್ದರು. ಲಖನೌ ವಿರುದ್ಧದ ಪಂದ್ಯದಲ್ಲೂ ಬದಲಿ ಆಟಗಾರನಾಗಿ ಆಡಿದ ಅವರು, ಆರೋಗ್ಯ ಸುಧಾರಿಸುತ್ತಿದೆ, ಆದರೆ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂಬುದನ್ನು ಬಹಿರಂಗಪಡಿಸಿದರು.</p><p>ಸದ್ಯ ವಿರಾಟ್ ಕೊಹ್ಲಿ ಅವರು ಆಡಿರುವ 5 ಇನಿಂಗ್ಸ್ಗಳಿಂದ 158.33 ಸ್ಟ್ರೈಕ್ ರೇಟ್ನಲ್ಲಿ 228 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.</p><p>ಲಖನೌ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಅವರು, ‘ಕಳೆದ ಪಂದ್ಯಕ್ಕೆ ಹೋಲಿಸಿದರೆ, ಈಗ ನಾನು ತುಂಬಾ ಚೆನ್ನಾಗಿದ್ದೇನೆ ಆದರೆ, ಇನ್ನೂ 100% ನಷ್ಟು ಗುಣಮುಖನಾಗಿಲ್ಲ. ಕಳೆದ ಪಂದ್ಯದಲ್ಲಿ ನನ್ನ ಮೊಣಕಾಲು ಸ್ವಲ್ಪ ನೋವಾಗಿತ್ತು. ಆರೋಗ್ಯದ ದೃಷ್ಟಿಯಿಂದಲೂ, ನಾಲ್ಕೈದು ದಿನಗಳಿಂದ ಹವಾಮಾನಕ್ಕೆ ಹೊಂದಿಕೊಳ್ಳಲು ಆಗುತ್ತಿಲ್ಲ. ಶೀಘ್ರದಲ್ಲೆ ನನ್ನ ಫಿಟ್ನೆಸ್ ಅನ್ನು ಮರಳಿ ಪಡೆಯುತ್ತೇನೆ’ ಎಂದರು.</p><p>ನಿನ್ನೆಯ ಪಂದ್ಯದಲ್ಲಿ ಆರಂಭದ 14 ಎಸೆತಗಳಲ್ಲಿ 34 ರನ್ ಗಳಿಸಿದ್ದ ಅವರು, ಕೊನೆಯಲ್ಲಿ ನಿಧಾನಗತಿಯ ಬ್ಯಾಟಿಂಗ್ಗೆ ಒತ್ತು ನೀಡಿದರು. ಈ ಕುರಿತು ಮಾತನಾಡಿದ ಅವರು, ‘ಇಂದು ನಾನು ಉತ್ತಮ ಆರಂಭ ಪಡೆದುಕೊಂಡೆ. ಆದರೆ, ನಂತರ ನಾನು ಪಂದ್ಯವನ್ನು ಮುಗಿಸುವುದರತ್ತ ಗಮನಹರಿಸಿದೆ. ಕೆಲವೊಮ್ಮೆ ಪರಿಸ್ಥಿತಿಗೆ ತಕ್ಕಂತೆ ಆಡಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಿನ್ನೆ (ಏಪ್ರಿಲ್ 15) ನಡೆದ ಐಪಿಎಲ್ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಖನೌ ಸೂಪರ್ ಜೈಂಟ್ಸ್ ಅನ್ನು ಸುಲಭವಾಗಿ ಮಣಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.</p><p>ಈ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ ಅವರು ಆರ್ಸಿಬಿ ಪರ ಗರಿಷ್ಠ ರನ್ ಸ್ಕೋರರ್ ಆದರು. ಅವರು 34 ಎಸೆತಗಳಲ್ಲಿ 49 ರನ್ ಬಾರಿಸಿದರು. ಮಾತ್ರವಲ್ಲ, ಈ ಬಾರಿಯ ಐಪಿಎಲ್ನಲ್ಲಿ ಆರೆಂಜ್ ಕ್ಯಾಪ್ ರೇಸ್ನಲ್ಲಿ ಅಗ್ರಸ್ಥಾನಕ್ಕೇರಿದರು.</p><p>ಕಳೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅವರಿಗೆ ಮೊಣಕಾಲಿನ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಮೈದಾನದಿಂದ ಹೊರಗುಳಿದಿದ್ದರು. ಲಖನೌ ವಿರುದ್ಧದ ಪಂದ್ಯದಲ್ಲೂ ಬದಲಿ ಆಟಗಾರನಾಗಿ ಆಡಿದ ಅವರು, ಆರೋಗ್ಯ ಸುಧಾರಿಸುತ್ತಿದೆ, ಆದರೆ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂಬುದನ್ನು ಬಹಿರಂಗಪಡಿಸಿದರು.</p><p>ಸದ್ಯ ವಿರಾಟ್ ಕೊಹ್ಲಿ ಅವರು ಆಡಿರುವ 5 ಇನಿಂಗ್ಸ್ಗಳಿಂದ 158.33 ಸ್ಟ್ರೈಕ್ ರೇಟ್ನಲ್ಲಿ 228 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.</p><p>ಲಖನೌ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಅವರು, ‘ಕಳೆದ ಪಂದ್ಯಕ್ಕೆ ಹೋಲಿಸಿದರೆ, ಈಗ ನಾನು ತುಂಬಾ ಚೆನ್ನಾಗಿದ್ದೇನೆ ಆದರೆ, ಇನ್ನೂ 100% ನಷ್ಟು ಗುಣಮುಖನಾಗಿಲ್ಲ. ಕಳೆದ ಪಂದ್ಯದಲ್ಲಿ ನನ್ನ ಮೊಣಕಾಲು ಸ್ವಲ್ಪ ನೋವಾಗಿತ್ತು. ಆರೋಗ್ಯದ ದೃಷ್ಟಿಯಿಂದಲೂ, ನಾಲ್ಕೈದು ದಿನಗಳಿಂದ ಹವಾಮಾನಕ್ಕೆ ಹೊಂದಿಕೊಳ್ಳಲು ಆಗುತ್ತಿಲ್ಲ. ಶೀಘ್ರದಲ್ಲೆ ನನ್ನ ಫಿಟ್ನೆಸ್ ಅನ್ನು ಮರಳಿ ಪಡೆಯುತ್ತೇನೆ’ ಎಂದರು.</p><p>ನಿನ್ನೆಯ ಪಂದ್ಯದಲ್ಲಿ ಆರಂಭದ 14 ಎಸೆತಗಳಲ್ಲಿ 34 ರನ್ ಗಳಿಸಿದ್ದ ಅವರು, ಕೊನೆಯಲ್ಲಿ ನಿಧಾನಗತಿಯ ಬ್ಯಾಟಿಂಗ್ಗೆ ಒತ್ತು ನೀಡಿದರು. ಈ ಕುರಿತು ಮಾತನಾಡಿದ ಅವರು, ‘ಇಂದು ನಾನು ಉತ್ತಮ ಆರಂಭ ಪಡೆದುಕೊಂಡೆ. ಆದರೆ, ನಂತರ ನಾನು ಪಂದ್ಯವನ್ನು ಮುಗಿಸುವುದರತ್ತ ಗಮನಹರಿಸಿದೆ. ಕೆಲವೊಮ್ಮೆ ಪರಿಸ್ಥಿತಿಗೆ ತಕ್ಕಂತೆ ಆಡಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>