‘ಹಿತಾಸಕ್ತಿ ಸಂಘರ್ಷ ನಿಯಮವು ಕ್ರಿಕೆಟ್ ಉತ್ಕೃಷ್ಠತೆಯನ್ನು ಹೆಚ್ಚಿಸುವಂತಿರಬೇಕು. ವಿವಿಎಸ್ ಲಕ್ಷ್ಮಣ್, ಸುನಿಲ್ ಗಾವಸ್ಕರ್, ಕಪಿಲ್ ದೇವ್, ಅಜರುದ್ದೀನ್ ಅವರಂತಹ ಹಲವಾರು ಕ್ರಿಕೆಟಿಗರ ಅನುಭವ ಮತ್ತು ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ನಿಯಮ ಸಹಕಾರಿಯಾಗಬೇಕು. ಅದರ ಬದಲಾಗಿ ಅವರನ್ನೇಲ್ಲ ಕಳೆದುಕೊಳ್ಳುವಂತಾಗಬಾರದು’ ಎಂದು ಗಂಗೂಲಿ ಅಭಿಪ್ರಾಯಪಟ್ಟರು.