<p><strong>ಕೋಲ್ಕತ್ತ</strong>: ವಿರಾಟ್ ಕೊಹ್ಲಿ ಅವರು ಹೊನಲು–ಬೆಳಕಿನ ಟೆಸ್ಟ್ ಪಂದ್ಯಗಳಲ್ಲಿ ಆಡುವುದನ್ನು ವಿರೋಧಿಸುತ್ತಾರೆನ್ನುವ ಮಾತುಗಳು ಸುಳ್ಳು. ಈ ಮಾದರಿಗೆ ಅವರ ಸಹಮತವಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.</p>.<p>ಶುಕ್ರವಾರ ಬಂಗಾಳ ಕ್ರಿಕೆಟ್ ಸಂಸ್ಥೆಯಲ್ಲಿ ಸನ್ಮಾನ ಸ್ವೀಕರಿಸಿದ ಅವರು, ‘ಟೆಸ್ಟ್ ಮಾದರಿಯ ಜನಪ್ರಿಯತೆಯನ್ನು ಹೆಚ್ಚಿಸುವ ಅವಶ್ಯಕತೆ ಇದೆ. ನಾವೆಲ್ಲರೂ ಸೇರಿ ಇದಕ್ಕೊಂದು ರೂಪುರೇಷೆ ರಚಿಸಬೇಕು. ಹೊನಲು ಬೆಳಕಿನಲ್ಲಿ ಟೆಸ್ಟ್ ಆಯೋಜನೆಯ ಬಗ್ಗೆ ನನಗಂತೂ ಉತ್ಕಟ ಒಲವಿದೆ. ಈ ಕುರಿತು ಶೀಘ್ರ ನಿರ್ಧರಿಸುತ್ತೇವೆ’ ಎಂದರು.</p>.<p>‘ಹಿತಾಸಕ್ತಿ ಸಂಘರ್ಷ ನಿಯಮವು ಕ್ರಿಕೆಟ್ ಉತ್ಕೃಷ್ಠತೆಯನ್ನು ಹೆಚ್ಚಿಸುವಂತಿರಬೇಕು. ವಿವಿಎಸ್ ಲಕ್ಷ್ಮಣ್, ಸುನಿಲ್ ಗಾವಸ್ಕರ್, ಕಪಿಲ್ ದೇವ್, ಅಜರುದ್ದೀನ್ ಅವರಂತಹ ಹಲವಾರು ಕ್ರಿಕೆಟಿಗರ ಅನುಭವ ಮತ್ತು ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ನಿಯಮ ಸಹಕಾರಿಯಾಗಬೇಕು. ಅದರ ಬದಲಾಗಿ ಅವರನ್ನೇಲ್ಲ ಕಳೆದುಕೊಳ್ಳುವಂತಾಗಬಾರದು’ ಎಂದು ಗಂಗೂಲಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ವಿರಾಟ್ ಕೊಹ್ಲಿ ಅವರು ಹೊನಲು–ಬೆಳಕಿನ ಟೆಸ್ಟ್ ಪಂದ್ಯಗಳಲ್ಲಿ ಆಡುವುದನ್ನು ವಿರೋಧಿಸುತ್ತಾರೆನ್ನುವ ಮಾತುಗಳು ಸುಳ್ಳು. ಈ ಮಾದರಿಗೆ ಅವರ ಸಹಮತವಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.</p>.<p>ಶುಕ್ರವಾರ ಬಂಗಾಳ ಕ್ರಿಕೆಟ್ ಸಂಸ್ಥೆಯಲ್ಲಿ ಸನ್ಮಾನ ಸ್ವೀಕರಿಸಿದ ಅವರು, ‘ಟೆಸ್ಟ್ ಮಾದರಿಯ ಜನಪ್ರಿಯತೆಯನ್ನು ಹೆಚ್ಚಿಸುವ ಅವಶ್ಯಕತೆ ಇದೆ. ನಾವೆಲ್ಲರೂ ಸೇರಿ ಇದಕ್ಕೊಂದು ರೂಪುರೇಷೆ ರಚಿಸಬೇಕು. ಹೊನಲು ಬೆಳಕಿನಲ್ಲಿ ಟೆಸ್ಟ್ ಆಯೋಜನೆಯ ಬಗ್ಗೆ ನನಗಂತೂ ಉತ್ಕಟ ಒಲವಿದೆ. ಈ ಕುರಿತು ಶೀಘ್ರ ನಿರ್ಧರಿಸುತ್ತೇವೆ’ ಎಂದರು.</p>.<p>‘ಹಿತಾಸಕ್ತಿ ಸಂಘರ್ಷ ನಿಯಮವು ಕ್ರಿಕೆಟ್ ಉತ್ಕೃಷ್ಠತೆಯನ್ನು ಹೆಚ್ಚಿಸುವಂತಿರಬೇಕು. ವಿವಿಎಸ್ ಲಕ್ಷ್ಮಣ್, ಸುನಿಲ್ ಗಾವಸ್ಕರ್, ಕಪಿಲ್ ದೇವ್, ಅಜರುದ್ದೀನ್ ಅವರಂತಹ ಹಲವಾರು ಕ್ರಿಕೆಟಿಗರ ಅನುಭವ ಮತ್ತು ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ನಿಯಮ ಸಹಕಾರಿಯಾಗಬೇಕು. ಅದರ ಬದಲಾಗಿ ಅವರನ್ನೇಲ್ಲ ಕಳೆದುಕೊಳ್ಳುವಂತಾಗಬಾರದು’ ಎಂದು ಗಂಗೂಲಿ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>