ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಮುನ್ನ ನಡೆದಿದ್ದ ಪತ್ರಿಕಾ ಸಂವಾದದಲ್ಲಿ ವಿರಾಟ್ ಕೊಹ್ಲಿ ತಮ್ಮನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಿದ್ದರ ಕುರಿತು ನೀಡಿದ್ದ ಹೇಳಿಕೆಯು ಚರ್ಚೆಗೆ ಗ್ರಾಸವಾಗಿತ್ತು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನೀಡಿದ್ದ ಹೇಳಿಕೆಗೆ ಕೊಹ್ಲಿಯ ಮಾತುಗಳು ವ್ಯತಿರಿಕ್ತವಾಗಿದ್ದವು. ಅಲ್ಲದೇ ಅವರು ಬ್ಯಾಟಿಂಗ್ನಲ್ಲಿ ಫಾರ್ಮ್ ಕಳೆದುಕೊಂಡಿದ್ದಾರೆ. ಕಳೆದೆರಡು ವರ್ಷಗಳಿಂದ ಒಂದೂ ಶತಕ ಹೊಡೆದಿಲ್ಲ. ಆದ್ದರಿಂದ ಈ ಎಲ್ಲ ವಿಷಯಗಳ ಕುರಿತು ಮಾಧ್ಯಮದ ಪ್ರತಿನಿಧಿಗಳ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಅವರು ಪತ್ರಿಕಾಗೋಷ್ಠಿಗೆ ಬರುತ್ತಿಲ್ಲ ಎಂಬ ಮಾತುಗಳೂ ಕೇಳಿಬಂದಿದ್ದವು.