ನವದೆಹಲಿ: ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ. ಭಾರತದ ಬಹುತೇಕ ಮತ್ತು ಪ್ರಮುಖ ಬ್ಯಾಟ್ಸ್ಮನ್ಗಳು ಗಾಯದ ಸಮಸ್ಯೆಗೆ ತುತ್ತಾಗಿದ್ದರೂ, ಟೀಮ್ ಇಂಡಿಯಾ ಮಾತ್ರ ಪಂದ್ಯ ಗೆದ್ದೇ ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸಿದೆ. ಈ ಮಧ್ಯೆ ಭಾರತ ತಂಡದ ಪರಿಶ್ರಮವನ್ನು ವಿರಾಟ್ ಕೊಹ್ಲಿ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ.