ಈ ಸಂದರ್ಭದಲ್ಲಿ ಹಾಜರಿದ್ದ ಭಾರತ ಫುಟ್ಬಾಲ್ ತಂಡದ ನಾಯಕ ಸುನೀಲ್ ಚೇಟ್ರಿ, ‘ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಿದೆ. ಆಟವಾಡುವಾಗ ತ್ವರಿತ ನಿರ್ಧಾರಗಳನ್ನು ಕೈಗೊಳ್ಳುವ ಗುಣ ಬೆಳೆಸಿಕೊಳ್ಳುತ್ತೇವೆ. ಇದು ಜೀವನದ ಎಲ್ಲ ಹಂತಗಳಲ್ಲಿಯೂ ಉಪಯುಕ್ತವಾಗುತ್ತದೆ’ ಎಂದರು.