ದುಬೈ: ಯುಎಇನಲ್ಲಿ ಪ್ರಸ್ತುತ ಸಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ.
ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್ನಿಂದ ಟೀಮ್ ಇಂಡಿಯಾದ ನಾಯಕತ್ವ ತೊರೆಯುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದರು.
ಇದನ್ನೂ ಓದಿ:IPL 2021: ಮುಗ್ಗರಿಸಿದ ಮುಂಬೈ, ಚೆನ್ನೈ ಜಯಭೇರಿ
ಇದಾದ ಬೆನ್ನಲ್ಲೇ ಕೆಲಸದೊತ್ತಡವನ್ನು ನಿಭಾಯಿಸುವ ನಿಟ್ಟಿನಲ್ಲಿ ಆರ್ಸಿಬಿ ನಾಯಕತ್ವಕ್ಕೂ ರಾಜೀನಾಮೆ ನೀಡಲು ವಿರಾಟ್ ನಿರ್ಧರಿಸಿದ್ದಾರೆ.
ಈ ಕುರಿತು ವಿಡಿಯೊ ಸಂದೇಶದಲ್ಲಿ ವಿರಾಟ್ ಕೊಹ್ಲಿ ವಿವರಿಸಿದ್ದು, ಓರ್ವ ಆಟಗಾರನಾಗಿ ಆರ್ಸಿಬಿ ತಂಡದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಲ್ಲದೆ ತನ್ನಲ್ಲಿ ನಂಬಿಕೆಯನ್ನಿರಿಸಿ ಬೆಂಬಲಿಸಿದ ಎಲ್ಲ ಆರ್ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.