‘ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್ಮೆಂಟ್ ಮತ್ತು ಆಯ್ಕೆದಾರರೊಂದಿಗೆ ವಿರಾಟ್ ಮಾತನಾಡಿದ್ದಾರೆ. ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ನನ್ನ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಕೆಲವು ವೈಯಕ್ತಿಕ ಸನ್ನಿವೇಶಗಳು ಅವರ ಉಪಸ್ಥಿತಿಯನ್ನು ಬಯಸುತ್ತವೆ ಎಂದು ಹೇಳಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
ಬದಲಿ ಆಟಗಾರನನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದೆ. ಜ.25ರಿಂದ ಹೈದರಾಬಾದ್ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ.