<p><strong>ನವದೆಹಲಿ:</strong>ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವಕೋವಿಡ್–19 ವೈರಸ್ ಕುರಿತುಪ್ರತಿಕ್ರಿಯಿಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.</p>.<p>ಸೋಂಕು ಕುರಿತುಟ್ವಿಟರ್ನಲ್ಲಿ ಬರೆದುಕೊಂಡಿರುವ ಅವರು, ‘ದೃಢವಾಗಿ ನಿಂತುಮತ್ತು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಮೂಲಕಕೋವಿಡ್–19 ವೈರಸ್ ವಿರುದ್ಧ ಹೋರಾಡಬೇಕಿದೆ. ಸುರಕ್ಷಿತವಾಗಿ, ಜಾಗರೂಕರಾಗಿರೋಣ.ಮುನ್ನೆಚ್ಚರಿಕೆ ವಹಿಸುವುದು ರೋಗದಿಂದ ಗುಣಮುಖರಾಗುವುದಕ್ಕಿಂತಲೂ ಉತ್ತಮವಾದುದ್ದು.ದಯವಿಟ್ಟು ಪ್ರತಿಯೊಬ್ಬರ ಬಗ್ಗೆಯೂಕಾಳಜಿ ವಹಿಸಿ’ ಎಂದು ಕರೆ ನೀಡಿದ್ದಾರೆ.</p>.<p>ಇದೇ ತಿಂಗಳು 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಏಪ್ರಿಲ್ 15ರ ವರೆಗೆ ಮುಂದೂಡಲಾಗಿದೆ.</p>.<p>ದೇಶದಾದ್ಯಂತ ಸುಮಾರು 80ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿರುವ ಹಾಗೂ ಇಬ್ಬರನ್ನು ಬಲಿ ಪಡೆದಿರುವ ಕೋವಿಡ್–19 ವೈರಸ್ ಭೀತಿಯಿಂದಾಗಿ ಭಾರತ–ದಕ್ಷಿಣ ಆಫ್ರಿಕಾ ಏಕದಿನ ಸರಣಿ, ಶ್ರೀಲಂಕಾ–ಇಂಗ್ಲೆಂಡ್ ಟೆಸ್ಟ್ ಸರಣಿ ಸೇರಿದಂತೆಹಲವು ಕ್ರೀಡಾಕೂಟಗಳೂ ರದ್ದಾಗಿವೆ.</p>.<p>ಪ್ರಪಂಚದಾದ್ಯಂತ ಸುಮಾರು 1.3 ಲಕ್ಷ ಜನರಲ್ಲಿ ವೈರಸ್ ಸೋಂಕು ದೃಢಪಟ್ಟಿದ್ದು, 5 ಸಾವಿರ ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವಕೋವಿಡ್–19 ವೈರಸ್ ಕುರಿತುಪ್ರತಿಕ್ರಿಯಿಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.</p>.<p>ಸೋಂಕು ಕುರಿತುಟ್ವಿಟರ್ನಲ್ಲಿ ಬರೆದುಕೊಂಡಿರುವ ಅವರು, ‘ದೃಢವಾಗಿ ನಿಂತುಮತ್ತು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಮೂಲಕಕೋವಿಡ್–19 ವೈರಸ್ ವಿರುದ್ಧ ಹೋರಾಡಬೇಕಿದೆ. ಸುರಕ್ಷಿತವಾಗಿ, ಜಾಗರೂಕರಾಗಿರೋಣ.ಮುನ್ನೆಚ್ಚರಿಕೆ ವಹಿಸುವುದು ರೋಗದಿಂದ ಗುಣಮುಖರಾಗುವುದಕ್ಕಿಂತಲೂ ಉತ್ತಮವಾದುದ್ದು.ದಯವಿಟ್ಟು ಪ್ರತಿಯೊಬ್ಬರ ಬಗ್ಗೆಯೂಕಾಳಜಿ ವಹಿಸಿ’ ಎಂದು ಕರೆ ನೀಡಿದ್ದಾರೆ.</p>.<p>ಇದೇ ತಿಂಗಳು 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಏಪ್ರಿಲ್ 15ರ ವರೆಗೆ ಮುಂದೂಡಲಾಗಿದೆ.</p>.<p>ದೇಶದಾದ್ಯಂತ ಸುಮಾರು 80ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿರುವ ಹಾಗೂ ಇಬ್ಬರನ್ನು ಬಲಿ ಪಡೆದಿರುವ ಕೋವಿಡ್–19 ವೈರಸ್ ಭೀತಿಯಿಂದಾಗಿ ಭಾರತ–ದಕ್ಷಿಣ ಆಫ್ರಿಕಾ ಏಕದಿನ ಸರಣಿ, ಶ್ರೀಲಂಕಾ–ಇಂಗ್ಲೆಂಡ್ ಟೆಸ್ಟ್ ಸರಣಿ ಸೇರಿದಂತೆಹಲವು ಕ್ರೀಡಾಕೂಟಗಳೂ ರದ್ದಾಗಿವೆ.</p>.<p>ಪ್ರಪಂಚದಾದ್ಯಂತ ಸುಮಾರು 1.3 ಲಕ್ಷ ಜನರಲ್ಲಿ ವೈರಸ್ ಸೋಂಕು ದೃಢಪಟ್ಟಿದ್ದು, 5 ಸಾವಿರ ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>