ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಸದಸ್ಯರಾಗಿರುವ ಲಕ್ಷ್ಮಣ್, ಸನ್ರೈಸರ್ಸ್ ಹೈದರಾಬಾದ್ ತಂಡದ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಹಿತಾಸಕ್ತಿ ಸಂಘರ್ಷಕ್ಕೆ ಸಿಲುಕಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ (ಎಂಪಿಸಿಎ) ಸದಸ್ಯ ಸಂಜೀವ್ ಗುಪ್ತಾ, ಒಂಬುಡ್ಸ್ಮನ್ಗೆ ದೂರು ನೀಡಿದ್ದರು. ಈ ಸಂಬಂಧ ಜೈನ್ ಅವರು ನೀಡಿದ್ದ ನೋಟಿಸ್ಗೆ ಲಕ್ಷ್ಮಣ್ ಉತ್ತರಿಸಿದ್ದಾರೆ.