‘ಭಾರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಿಕೊಳ್ಳುವುದು ಬಹುಶಃ ಯಾರಿಗೇ ಆದರೂ ಕಠಿಣ ಸವಾಲು ಎಂಬುದು ನನ್ನ ಭಾವನೆ. ಏಕೆಂದರೆ ಪ್ರಪಂಚದಾದ್ಯಂತ ಪ್ರತಿಯೊಬ್ಬರಿಂದಲೂ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳಿರುತ್ತವೆ. ಆದರೆ, ಧೋನಿ ಅವರು ಯಾವಾಗಲೂ ಫಲಿತಾಂಶಗಳಿಂದ ಭಾವನಾತ್ಮಕವಾಗಿ ದೂರ ಉಳಿಯುತ್ತಿದ್ದರು’ ಎಂದು ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ಕಾರ್ಯಕ್ರಮವೊಂದರಲ್ಲಿಲಕ್ಷ್ಮಣ್ ಹೇಳಿದ್ದಾರೆ.