<p><strong>ಕೊಲಂಬೊ</strong>: ಭಾರತ ವಿರುದ್ಧ 3 ಪಂದ್ಯಗಳ ಟಿ–20 ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗೂ ಮುನ್ನ ಶ್ರೀಲಂಕಾ ಟಿ–20 ಕ್ರಿಕೆಟ್ ತಂಡದ ನಾಯಕನ ಸ್ಥಾನದಿಂದ ಸ್ಪಿನ್ನರ್ ವನಿಂದು ಹಸರಂಗಾ ಕೆಳಗಿಳಿದಿದ್ದಾರೆ.</p><p>ಪಲೆಕಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜುಲೈ 26, 27 ಮತ್ತು 29ರಂದು ನಡೆಯಲಿರುವ ಮೂರು ಟಿ–20 ಪಂದ್ಯಗಳು ಮತ್ತು ಬಳಿಕ ನಡೆಯಲಿರುವ ಏಕದಿನ ಸರಣಿಗಾಗಿ ಭಾರತ ತಂಡ ಶ್ರೀಲಂಕಾಗೆ ಪ್ರವಾಸ ಕೈಗೊಳ್ಳಲಿದೆ.</p><p>‘ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟಿ–20 ನಾಯಕತ್ವಕ್ಕೆ ರಾಜೀನಾಮೆ ನೀಡಲು ವನಿಂದು ಹಸರಂಗಾ ನಿರ್ಧರಿಸಿದ್ದಾರೆ ಎಂಬುದನ್ನು ಜನರಿಗೆ ತಿಳಿಸಲು ಬಯಸುತ್ತೇವೆ’ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಸಿ) ಪ್ರಕಟಣೆಯಲ್ಲಿ ತಿಳಿಸಿದೆ.</p><p>‘ಶ್ರೀಲಂಕಾ ಕ್ರಿಕೆಟ್ನ ಹಿತಾಸಕ್ತಿಗಾಗಿ ನಾಯಕನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿದ್ದೇನೆ. ತಂಡದ ಆಟಗಾರನಾಗಿ ಮುಂದುವರಿಯುವುದಾಗಿ ಹಸರಂಗಾ ತಿಳಿಸಿದ್ದಾರೆ’ಎಂದು ಪ್ರಕಟಣೆ ತಿಳಿಸಿದೆ.</p><p>ಟಿ–20 ವಿಶ್ವಕಪ್ನಲ್ಲಿ ತಂಡವನ್ನು ಮುನ್ನಡೆಸಿದ್ದ ಹಸರಂಗಾ, ತಂಡವನ್ನು ಸೂಪರ್–8ರ ಹಂತಕ್ಕೆ ಕೊಂಡೊಯ್ಯುವಲ್ಲಿ ವಿಫಲರಾಗಿದ್ದರು.</p><p>‘ಒಬ್ಬ ಆಟಗಾರನಾಗಿ ಶ್ರೀಲಂಕಾ ತಂಡಕ್ಕಾಗಿ ಸಂಪೂರ್ಣ ಶ್ರಮ ಹಾಕುತ್ತೇನೆ. ನಾನು ನನ್ನ ತಂಡ ಮತ್ತು ನಾಯಕರ ಜೊತೆ ಸದಾ ನಿಲ್ಲುತ್ತೇನೆ’ ಎಂದು ಹಸರಂಗಾ ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.</p><p>ಹಸರಂಗಾ ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಹೇಳಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿಯು, ಅಂತರರಾಷ್ಟ್ರೀಯ ಸರಣಿಗಳಲ್ಲಿ ಅವರೊಬ್ಬ ನಮ್ಮ ತಂಡದ ಅತ್ಯುತ್ತಮ ಆಟಗಾರರಾಗಿರುತ್ತಾರೆ ಎಂದು ಹೇಳಿದೆ.</p> .ದ್ರಾವಿಡ್ ಕುರಿತಂತೆ ಭಾವನಾತ್ಮಕ ಸಂದೇಶ ಹಂಚಿಕೊಂಡ ರೋಹಿತ್ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಭಾರತ ವಿರುದ್ಧ 3 ಪಂದ್ಯಗಳ ಟಿ–20 ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗೂ ಮುನ್ನ ಶ್ರೀಲಂಕಾ ಟಿ–20 ಕ್ರಿಕೆಟ್ ತಂಡದ ನಾಯಕನ ಸ್ಥಾನದಿಂದ ಸ್ಪಿನ್ನರ್ ವನಿಂದು ಹಸರಂಗಾ ಕೆಳಗಿಳಿದಿದ್ದಾರೆ.</p><p>ಪಲೆಕಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜುಲೈ 26, 27 ಮತ್ತು 29ರಂದು ನಡೆಯಲಿರುವ ಮೂರು ಟಿ–20 ಪಂದ್ಯಗಳು ಮತ್ತು ಬಳಿಕ ನಡೆಯಲಿರುವ ಏಕದಿನ ಸರಣಿಗಾಗಿ ಭಾರತ ತಂಡ ಶ್ರೀಲಂಕಾಗೆ ಪ್ರವಾಸ ಕೈಗೊಳ್ಳಲಿದೆ.</p><p>‘ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟಿ–20 ನಾಯಕತ್ವಕ್ಕೆ ರಾಜೀನಾಮೆ ನೀಡಲು ವನಿಂದು ಹಸರಂಗಾ ನಿರ್ಧರಿಸಿದ್ದಾರೆ ಎಂಬುದನ್ನು ಜನರಿಗೆ ತಿಳಿಸಲು ಬಯಸುತ್ತೇವೆ’ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಸಿ) ಪ್ರಕಟಣೆಯಲ್ಲಿ ತಿಳಿಸಿದೆ.</p><p>‘ಶ್ರೀಲಂಕಾ ಕ್ರಿಕೆಟ್ನ ಹಿತಾಸಕ್ತಿಗಾಗಿ ನಾಯಕನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿದ್ದೇನೆ. ತಂಡದ ಆಟಗಾರನಾಗಿ ಮುಂದುವರಿಯುವುದಾಗಿ ಹಸರಂಗಾ ತಿಳಿಸಿದ್ದಾರೆ’ಎಂದು ಪ್ರಕಟಣೆ ತಿಳಿಸಿದೆ.</p><p>ಟಿ–20 ವಿಶ್ವಕಪ್ನಲ್ಲಿ ತಂಡವನ್ನು ಮುನ್ನಡೆಸಿದ್ದ ಹಸರಂಗಾ, ತಂಡವನ್ನು ಸೂಪರ್–8ರ ಹಂತಕ್ಕೆ ಕೊಂಡೊಯ್ಯುವಲ್ಲಿ ವಿಫಲರಾಗಿದ್ದರು.</p><p>‘ಒಬ್ಬ ಆಟಗಾರನಾಗಿ ಶ್ರೀಲಂಕಾ ತಂಡಕ್ಕಾಗಿ ಸಂಪೂರ್ಣ ಶ್ರಮ ಹಾಕುತ್ತೇನೆ. ನಾನು ನನ್ನ ತಂಡ ಮತ್ತು ನಾಯಕರ ಜೊತೆ ಸದಾ ನಿಲ್ಲುತ್ತೇನೆ’ ಎಂದು ಹಸರಂಗಾ ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.</p><p>ಹಸರಂಗಾ ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಹೇಳಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿಯು, ಅಂತರರಾಷ್ಟ್ರೀಯ ಸರಣಿಗಳಲ್ಲಿ ಅವರೊಬ್ಬ ನಮ್ಮ ತಂಡದ ಅತ್ಯುತ್ತಮ ಆಟಗಾರರಾಗಿರುತ್ತಾರೆ ಎಂದು ಹೇಳಿದೆ.</p> .ದ್ರಾವಿಡ್ ಕುರಿತಂತೆ ಭಾವನಾತ್ಮಕ ಸಂದೇಶ ಹಂಚಿಕೊಂಡ ರೋಹಿತ್ ಶರ್ಮಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>