<p><strong>ಪುಣೆ:</strong> ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ 20 ರನ್ ಅಂತರದ ಗೆಲುವು ದಾಖಲಿಸಿದೆ.</p>.<p>ಪಂಜಾಬ್ ವಿರುದ್ಧ ಪಂದ್ಯ ಗೆದ್ದರೂ ಲಖನೌ ನಾಯಕ ರಾಹುಲ್, ತಂಡದ ಕಳಪೆ ಬ್ಯಾಟಿಂಗ್ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-royal-challengers-bangalore-vs-gujarat-titans-live-updates-in-kannada-at-mumbai-932822.html" itemprop="url">IPL 2022 RCB vs GT: ಗುಜರಾತ್ ವಿರುದ್ಧ ಟಾಸ್ ಗೆದ್ದ ಆರ್ಸಿಬಿ ಬ್ಯಾಟಿಂಗ್ </a></p>.<p>ಮೊದಲ ಇನ್ನಿಂಗ್ಸ್ನ ಕೊನೆಯಲ್ಲಿ ಬ್ಯಾಟಿಂಗ್ ಮಾಡಿದ ರೀತಿಯ ಬಗ್ಗೆ ನಿರಾಶೆಗೊಂಡಿದ್ದೇನೆ. ಇದು ಮೂರ್ಖತನದ ಕ್ರಿಕೆಟ್ ಆಗಿತ್ತು ಎಂದು ಹೇಳಿದ್ದಾರೆ.</p>.<p>ಬ್ಯಾಟಿಂಗ್ನಲ್ಲಿ ಉತ್ತಮ ನಿರ್ವಹಣೆ ನೀಡಬೇಕಿದೆ. ಕ್ವಿಂಟನ್ ಡಿ ಕಾಕ್ ಹಾಗೂ ದೀಪಕ್ ಹೂಡಾ ಉತ್ತಮ ಜೊತೆಯಾಟ ಕಟ್ಟಿದರು. ನಾವು ಸ್ಮಾರ್ಟ್ ಕ್ರಿಕೆಟ್ ಆಡಿದ್ದರೆ 180-190 ರನ್ ಗಳಿಸಬಹುದಿತ್ತು ಎಂದು ತಿಳಿಸಿದ್ದಾರೆ.</p>.<p>ಪಂದ್ಯವನ್ನು ಗ್ರಹಿಸುವಲ್ಲಿ ನಾವು ಮತ್ತಷ್ಟು ಚುರುಕಾಗಿರಬೇಕು. ಕೆಟ್ಟ ಹೊಡೆತಗಳನ್ನು ಆಡದಿದ್ದರೆ ಉತ್ತಮ ಮೊತ್ತ ಕಲೆ ಹಾಕಬಹುದಿತ್ತು. ಆದರೂ ಬೌಲಿಂಗ್ ಹಾಗೂ ಫೀಲ್ಡಿಂಗ್ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ 20 ರನ್ ಅಂತರದ ಗೆಲುವು ದಾಖಲಿಸಿದೆ.</p>.<p>ಪಂಜಾಬ್ ವಿರುದ್ಧ ಪಂದ್ಯ ಗೆದ್ದರೂ ಲಖನೌ ನಾಯಕ ರಾಹುಲ್, ತಂಡದ ಕಳಪೆ ಬ್ಯಾಟಿಂಗ್ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/ipl-2022-royal-challengers-bangalore-vs-gujarat-titans-live-updates-in-kannada-at-mumbai-932822.html" itemprop="url">IPL 2022 RCB vs GT: ಗುಜರಾತ್ ವಿರುದ್ಧ ಟಾಸ್ ಗೆದ್ದ ಆರ್ಸಿಬಿ ಬ್ಯಾಟಿಂಗ್ </a></p>.<p>ಮೊದಲ ಇನ್ನಿಂಗ್ಸ್ನ ಕೊನೆಯಲ್ಲಿ ಬ್ಯಾಟಿಂಗ್ ಮಾಡಿದ ರೀತಿಯ ಬಗ್ಗೆ ನಿರಾಶೆಗೊಂಡಿದ್ದೇನೆ. ಇದು ಮೂರ್ಖತನದ ಕ್ರಿಕೆಟ್ ಆಗಿತ್ತು ಎಂದು ಹೇಳಿದ್ದಾರೆ.</p>.<p>ಬ್ಯಾಟಿಂಗ್ನಲ್ಲಿ ಉತ್ತಮ ನಿರ್ವಹಣೆ ನೀಡಬೇಕಿದೆ. ಕ್ವಿಂಟನ್ ಡಿ ಕಾಕ್ ಹಾಗೂ ದೀಪಕ್ ಹೂಡಾ ಉತ್ತಮ ಜೊತೆಯಾಟ ಕಟ್ಟಿದರು. ನಾವು ಸ್ಮಾರ್ಟ್ ಕ್ರಿಕೆಟ್ ಆಡಿದ್ದರೆ 180-190 ರನ್ ಗಳಿಸಬಹುದಿತ್ತು ಎಂದು ತಿಳಿಸಿದ್ದಾರೆ.</p>.<p>ಪಂದ್ಯವನ್ನು ಗ್ರಹಿಸುವಲ್ಲಿ ನಾವು ಮತ್ತಷ್ಟು ಚುರುಕಾಗಿರಬೇಕು. ಕೆಟ್ಟ ಹೊಡೆತಗಳನ್ನು ಆಡದಿದ್ದರೆ ಉತ್ತಮ ಮೊತ್ತ ಕಲೆ ಹಾಕಬಹುದಿತ್ತು. ಆದರೂ ಬೌಲಿಂಗ್ ಹಾಗೂ ಫೀಲ್ಡಿಂಗ್ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>