ಆಗಸ್ಟ್ 3ರಿಂದ ಸೆಪ್ಟೆಂಬರ್ 3ರ ವರೆಗೆ ನಡೆಯಲಿರುವ ವೆಸ್ಟ್ ಇಂಡೀಸ್ ಎದುರಿನ ಸರಣಿಯ ಸಂದರ್ಭದಲ್ಲಿ ರವಿಶಾಸ್ತ್ರಿ, ಬೌಲಿಂಗ್ ಕೊಚ್ ಭರತ್ ಅರುಣ್, ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಮತ್ತು ಫೀಲ್ಡಿಂಗ್ ಕೊಚ್ ಆರ್.ಶ್ರೀಧರ್ ತಂಡದೊಂದಿಗೆ ಇರುತ್ತಾರೆ. ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ನಂತರ ಹೊಸ ಕೋಚ್ ಮತ್ತು ಸಿಬ್ಬಂದಿಯನ್ನು ಆಯ್ಕೆ ಮಾಡಲಿದೆ.