<p><strong>ಕೋಲ್ಕತ್ತ:</strong> ಮೂರು ಟಿ20 ಪಂದ್ಯಗಳ ಸರಣಿಯ ಕಡೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.</p>.<p>ಕೋಲ್ಕತ್ತದ ಈಡನ್ ಗಾರ್ಡನ್ನಲ್ಲಿ ಟಿ20 ಪಂದ್ಯ ನಡೆಯುತ್ತಿದ್ದು, ಭಾರತವು ಮೊದಲು ಬ್ಯಾಟ್ ಮಾಡಲಿದೆ.</p>.<p>ಮೂರು ಪಂದ್ಯಗಳ ಪೈಕಿ ಭಾರತ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ಈ ಪಂದ್ಯ ಭಾರತಕ್ಕೆ ಅಷ್ಟೇನೂ ಮಹತ್ವದ್ದೆನಿಸಿಲ್ಲ.</p>.<p>ಈ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತು ಋತುರಾಜ್ ಗಾಯಕ್ವಾಡ್ ಅವರು ಓಪನಿಂಗ್ ಬರಲಿದ್ದಾರೆ.</p>.<p>ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್, ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ 10 ದಿನಗಳ ರಜೆ ನೀಡಿದ್ದು, ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.</p>.<p>ಆವೇಶ್ ಖಾನ್ ಈ ಟಿ20 ಮೂಲಕ ಅಂತರರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ.</p>.<p><strong>ಭಾರತ ತಂಡ ಹೀಗಿದೆ</strong></p>.<p>ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ವೆಂಕಟೇಶ್ ಐಯ್ಯರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಶಾರ್ದೂಲ್ ಠಾಕೂರ್, ಆವೇಶ್ ಖಾನ್, ರವಿ ಬಿಶ್ನೋಯ್</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಮೂರು ಟಿ20 ಪಂದ್ಯಗಳ ಸರಣಿಯ ಕಡೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.</p>.<p>ಕೋಲ್ಕತ್ತದ ಈಡನ್ ಗಾರ್ಡನ್ನಲ್ಲಿ ಟಿ20 ಪಂದ್ಯ ನಡೆಯುತ್ತಿದ್ದು, ಭಾರತವು ಮೊದಲು ಬ್ಯಾಟ್ ಮಾಡಲಿದೆ.</p>.<p>ಮೂರು ಪಂದ್ಯಗಳ ಪೈಕಿ ಭಾರತ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ಈ ಪಂದ್ಯ ಭಾರತಕ್ಕೆ ಅಷ್ಟೇನೂ ಮಹತ್ವದ್ದೆನಿಸಿಲ್ಲ.</p>.<p>ಈ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತು ಋತುರಾಜ್ ಗಾಯಕ್ವಾಡ್ ಅವರು ಓಪನಿಂಗ್ ಬರಲಿದ್ದಾರೆ.</p>.<p>ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್, ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ 10 ದಿನಗಳ ರಜೆ ನೀಡಿದ್ದು, ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.</p>.<p>ಆವೇಶ್ ಖಾನ್ ಈ ಟಿ20 ಮೂಲಕ ಅಂತರರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ.</p>.<p><strong>ಭಾರತ ತಂಡ ಹೀಗಿದೆ</strong></p>.<p>ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ವೆಂಕಟೇಶ್ ಐಯ್ಯರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಶಾರ್ದೂಲ್ ಠಾಕೂರ್, ಆವೇಶ್ ಖಾನ್, ರವಿ ಬಿಶ್ನೋಯ್</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>