<p>ಬೆಂಗಳೂರು: ಸ್ಪಿನ್ ಬೌಲಿಂಗ್ಗೆ ನೆರವು ನೀಡುವ ಭಾರತದ ಪಿಚ್ಗಳಲ್ಲಿ ಪರಿಣಾಮಕಾರಿಯಾಗಬಲ್ಲ ಬೌಲರ್ಗಳು ನಮ್ಮ ತಂಡದಲ್ಲಿದ್ದಾರೆ ಎಂದು ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.</p>.<p>‘ಅನುಭವಿ ಸ್ಪಿನ್ನರ್ ನೇಥನ್ ಲಯನ್ ಅವರಿಗೆ ತಕ್ಕ ಸಾಥ್ ನೀಡಲು ಸಾಕಷ್ಟು ಆಯ್ಕೆಗಳು ಇವೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗಾವಸ್ಕರ್– ಬಾರ್ಡರ್ ಟ್ರೋಫಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಸ್ಟ್ರೇಲಿಯಾದ ಆಟಗಾರರು ಕಳೆದ ಕೆಲ ದಿನಗಳಿಂದ ಆಲೂರಿನ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.</p>.<p>ನೇಥನ್ ಲಯನ್ ಅಲ್ಲದೆ, ಸ್ಪಿನ್ನರ್ಗಳಾದ ಆ್ಯಷ್ಟನ್ ಆಗರ್ ಮತ್ತು ಮಿಚೆಲ್ ಸ್ವಿಪ್ಸನ್ ಅವರಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ನೀಡಲಾಗಿದೆ.</p>.<p>‘ಎದುರಾಳಿ ತಂಡದ 20 ವಿಕೆಟ್ಗಳನ್ನು ಪಡೆಯುವ ಸಾಮರ್ಥ್ಯ ಹೊಂದಿರುವ ಬೌಲರ್ಗಳನ್ನು ಅಂತಿಮ ಇಲೆವೆನ್ನಲ್ಲಿ ಕಣಕ್ಕಿಳಿಸುತ್ತೇವೆ. ಎಷ್ಟು ಸಿನ್ನರ್ಗಳಿಗೆ ಅವಕಾಶ ನೀಡಬೇಕು ಎಂಬುದನ್ನು ಪಿಚ್ನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸ್ಪಿನ್ ಬೌಲಿಂಗ್ಗೆ ನೆರವು ನೀಡುವ ಭಾರತದ ಪಿಚ್ಗಳಲ್ಲಿ ಪರಿಣಾಮಕಾರಿಯಾಗಬಲ್ಲ ಬೌಲರ್ಗಳು ನಮ್ಮ ತಂಡದಲ್ಲಿದ್ದಾರೆ ಎಂದು ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.</p>.<p>‘ಅನುಭವಿ ಸ್ಪಿನ್ನರ್ ನೇಥನ್ ಲಯನ್ ಅವರಿಗೆ ತಕ್ಕ ಸಾಥ್ ನೀಡಲು ಸಾಕಷ್ಟು ಆಯ್ಕೆಗಳು ಇವೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗಾವಸ್ಕರ್– ಬಾರ್ಡರ್ ಟ್ರೋಫಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಸ್ಟ್ರೇಲಿಯಾದ ಆಟಗಾರರು ಕಳೆದ ಕೆಲ ದಿನಗಳಿಂದ ಆಲೂರಿನ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.</p>.<p>ನೇಥನ್ ಲಯನ್ ಅಲ್ಲದೆ, ಸ್ಪಿನ್ನರ್ಗಳಾದ ಆ್ಯಷ್ಟನ್ ಆಗರ್ ಮತ್ತು ಮಿಚೆಲ್ ಸ್ವಿಪ್ಸನ್ ಅವರಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ನೀಡಲಾಗಿದೆ.</p>.<p>‘ಎದುರಾಳಿ ತಂಡದ 20 ವಿಕೆಟ್ಗಳನ್ನು ಪಡೆಯುವ ಸಾಮರ್ಥ್ಯ ಹೊಂದಿರುವ ಬೌಲರ್ಗಳನ್ನು ಅಂತಿಮ ಇಲೆವೆನ್ನಲ್ಲಿ ಕಣಕ್ಕಿಳಿಸುತ್ತೇವೆ. ಎಷ್ಟು ಸಿನ್ನರ್ಗಳಿಗೆ ಅವಕಾಶ ನೀಡಬೇಕು ಎಂಬುದನ್ನು ಪಿಚ್ನ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧರಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>