'ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ', 'ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ' ಮತ್ತು 'ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆ'ಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಪಂಜಾಬ್, ಹರಿಯಾಣದ ರೈತರು ದೆಹಲಿ ಸಮೀಪದ ಸಿಂಗು ಬಾರ್ಡರ್ ಬಳಿ ಕಳೆದ ಐದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಮಾಂಟಿ ಪನೇಸರ್ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.