ತಂಡದ ಸಂಯೋಜನೆ ಕುರಿತು ಶೀಘ್ರ ನಿರ್ಧಾರ: ಅಜಿಂಕ್ಯ ರಹಾನೆ

ಅಡಿಲೇಡ್: ವೇಗಿ ಇಶಾಂತ್ ಶರ್ಮಾ ಅವರ ಅನುಪಸ್ಥಿತಿಯು ತಂಡಕ್ಕೆ ಬಹಳ ಕಾಡಲಿದೆ. ಆದರೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ತಂಡದ ಸಂಯೋಜನೆಯ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತ ತಂಡದ ಉಪನಾಯಕ ಅಜಿಂಕ್ಯ ರಹಾನೆ ಹೇಳಿದ್ದಾರೆ.
ಮಂಗಳವಾರ ನಡೆದ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
‘ನಮ್ಮ ತಂಡದಲ್ಲಿ ಉತ್ತಮ ಬೌಲರ್ಗಳಿದ್ದಾರೆ. ಪಕ್ಕೆಲುಬು ಗಾಯದಿಂದ ಬಳಲುತ್ತಿರುವ ಇಶಾಂತ್ ಅವರ ಅನುಪಸ್ಥಿತಿ ಖಂಡಿತವಾಗಿಯೂ ಕಾಡಲಿದೆ‘ ಎಂದಿದ್ದಾರೆ.
‘ಲಭ್ಯವಿರುವ ನಾಲ್ವರು ಆರಂಭಿಕ ಬ್ಯಾಟ್ಸ್ಮನ್ಗಳು (ಮಯಂಕ್ ಅಗರವಾಲ್, ಪೃಥ್ವಿ ಶಾ, ಶುಭಮನ್ ಗಿಲ್ ಮತ್ತು ಕೆ.ಎಲ್.ರಾಹುಲ್), ಇಬ್ಬರು ವಿಕೆಟ್ ಕೀಪರ್ಗಳಲ್ಲಿ (ವೃದ್ಧಿಮಾನ್ ಸಹಾ ಮತ್ತು ರಿಷಭ್ ಪಂತ್) ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಬುಧವಾರ ನಿರ್ಧಾರ ತೆಗೆದುಕೊಳ್ಳುತ್ತೇವೆ‘ ಎಂದು ರಹಾನೆ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.