<p><strong>ಮುಂಬೈ:</strong> ಮಹಿಳಾ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಶುಭಾಶಯಗಳನ್ನು ತಿಳಿಸಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದ ಆಟಗಾರ್ತಿಯರಿಗೆ ನಗದು ಬಹುಮಾನ ನೀಡುವುದಾಗಿ ಮಂಗಳವಾರ ತಿಳಿಸಿದೆ.</p><p>ಮೊದಲ ಬಾರಿ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡದಲ್ಲಿದ್ದ ಮಹಾರಾಷ್ಟ್ರ ಮೂಲದ ಆಟಗಾರ್ತಿಯರಾದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಹಾಗೂ ರಾಧಾ ಯಾದವ್ ಅವರಿಗೆ ನಗದು ಬಹುಮಾನ ನೀಡಿ, ಗೌರವಿಸಲಿದ್ದೇವೆ ಎಂದು ಮುಖ್ಯಮಂತ್ರಿ ಕಚೇರಿಯು ಹೇಳಿದೆ.</p><p>ಆದರೆ, ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿ ಕಚೇರಿಯು ತಿಳಿಸಿಲ್ಲ. </p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಅವರು ಕೂಡ ಭಾಗವಹಿಸಿದ್ದರು. </p><p>ಭಾನುವಾರ ರಾತ್ರಿ ನವಿ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ಗಳ ಅಂತರದಲ್ಲಿ ಸೋಲಿಸುವ ಮೂಲಕ ವಿಶ್ವಕಪ್ ಗೆದ್ದುಕೊಂಡಿತ್ತು.</p>.ಮಹಿಳಾ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ವಜ್ರದ ಉಡುಗೊರೆ ಘೋಷಿಸಿದ ಸೂರತ್ ಉದ್ಯಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಿಳಾ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಶುಭಾಶಯಗಳನ್ನು ತಿಳಿಸಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದ ಆಟಗಾರ್ತಿಯರಿಗೆ ನಗದು ಬಹುಮಾನ ನೀಡುವುದಾಗಿ ಮಂಗಳವಾರ ತಿಳಿಸಿದೆ.</p><p>ಮೊದಲ ಬಾರಿ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡದಲ್ಲಿದ್ದ ಮಹಾರಾಷ್ಟ್ರ ಮೂಲದ ಆಟಗಾರ್ತಿಯರಾದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಹಾಗೂ ರಾಧಾ ಯಾದವ್ ಅವರಿಗೆ ನಗದು ಬಹುಮಾನ ನೀಡಿ, ಗೌರವಿಸಲಿದ್ದೇವೆ ಎಂದು ಮುಖ್ಯಮಂತ್ರಿ ಕಚೇರಿಯು ಹೇಳಿದೆ.</p><p>ಆದರೆ, ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿ ಕಚೇರಿಯು ತಿಳಿಸಿಲ್ಲ. </p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಅವರು ಕೂಡ ಭಾಗವಹಿಸಿದ್ದರು. </p><p>ಭಾನುವಾರ ರಾತ್ರಿ ನವಿ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ಗಳ ಅಂತರದಲ್ಲಿ ಸೋಲಿಸುವ ಮೂಲಕ ವಿಶ್ವಕಪ್ ಗೆದ್ದುಕೊಂಡಿತ್ತು.</p>.ಮಹಿಳಾ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ವಜ್ರದ ಉಡುಗೊರೆ ಘೋಷಿಸಿದ ಸೂರತ್ ಉದ್ಯಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>