<p>ಕೇಪ್ಟೌನ್ : ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ನ (ಡಬ್ಲ್ಯುಪಿಎಲ್) ಆಟಗಾರ್ತಿಯರ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆಯಾದರೂ, ಪಾಕಿಸ್ತಾನ ವಿರುದ್ಧದ ಪಂದ್ಯದ ಮೇಲೆ ಗಮನಹರಿಸಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹೇಳಿದ್ದಾರೆ.</p>.<p>ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಫೆ.12 ರಂದು ಪಾಕಿಸ್ತಾನ ವಿರುದ್ಧ ಪೈಪೋಟಿ ನಡೆಸಲಿದೆ. ಮರುದಿನ (ಫೆ.13) ಮುಂಬೈನಲ್ಲಿ ಡಬ್ಲ್ಯುಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ.</p>.<p>‘ಹರಾಜು ಪ್ರಕ್ರಿಯೆಗೆ ಮುನ್ನ ನಮಗೆ ಅತ್ಯಂತ ಮಹತ್ವದ ಪಂದ್ಯ ಆಡಬೇಕಿದೆ. ತಂಡದ ಎಲ್ಲ ಸದಸ್ಯರೂ ಆ ಪಂದ್ಯದತ್ತ ಗಮನ ಕೇಂದ್ರೀಕರಿಸಿದ್ದಾರೆ’ ಎಂದು ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ವಿಶ್ವಕಪ್ ಟೂರ್ನಿ ಇತರ ಎಲ್ಲಕ್ಕಿಂತಲೂ ಮಹತ್ವದ್ದಾಗಿದೆ. ನಮ್ಮ ಗಮನ ಐಸಿಸಿ ಟ್ರೋಫಿಯತ್ತ ನೆಟ್ಟಿದೆ. ಒಬ್ಬ ಆಟಗಾರ್ತಿಯಾಗಿ ನಿಮಗೆ ಯಾವುದು ಮುಖ್ಯವಾದುದು ಎಂಬುದು ತಿಳಿದಿರಬೇಕು. ಈ ಸಮಯ ದಲ್ಲಿ ಯಾವುದು ಮುಖ್ಯ ಎಂಬುದನ್ನು ತಿಳಿಯುವಷ್ಟು ನಾವೆಲ್ಲರೂ ಪ್ರಬುದ್ಧರಾಗಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೇಪ್ಟೌನ್ : ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ನ (ಡಬ್ಲ್ಯುಪಿಎಲ್) ಆಟಗಾರ್ತಿಯರ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆಯಾದರೂ, ಪಾಕಿಸ್ತಾನ ವಿರುದ್ಧದ ಪಂದ್ಯದ ಮೇಲೆ ಗಮನಹರಿಸಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹೇಳಿದ್ದಾರೆ.</p>.<p>ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಫೆ.12 ರಂದು ಪಾಕಿಸ್ತಾನ ವಿರುದ್ಧ ಪೈಪೋಟಿ ನಡೆಸಲಿದೆ. ಮರುದಿನ (ಫೆ.13) ಮುಂಬೈನಲ್ಲಿ ಡಬ್ಲ್ಯುಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ.</p>.<p>‘ಹರಾಜು ಪ್ರಕ್ರಿಯೆಗೆ ಮುನ್ನ ನಮಗೆ ಅತ್ಯಂತ ಮಹತ್ವದ ಪಂದ್ಯ ಆಡಬೇಕಿದೆ. ತಂಡದ ಎಲ್ಲ ಸದಸ್ಯರೂ ಆ ಪಂದ್ಯದತ್ತ ಗಮನ ಕೇಂದ್ರೀಕರಿಸಿದ್ದಾರೆ’ ಎಂದು ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ವಿಶ್ವಕಪ್ ಟೂರ್ನಿ ಇತರ ಎಲ್ಲಕ್ಕಿಂತಲೂ ಮಹತ್ವದ್ದಾಗಿದೆ. ನಮ್ಮ ಗಮನ ಐಸಿಸಿ ಟ್ರೋಫಿಯತ್ತ ನೆಟ್ಟಿದೆ. ಒಬ್ಬ ಆಟಗಾರ್ತಿಯಾಗಿ ನಿಮಗೆ ಯಾವುದು ಮುಖ್ಯವಾದುದು ಎಂಬುದು ತಿಳಿದಿರಬೇಕು. ಈ ಸಮಯ ದಲ್ಲಿ ಯಾವುದು ಮುಖ್ಯ ಎಂಬುದನ್ನು ತಿಳಿಯುವಷ್ಟು ನಾವೆಲ್ಲರೂ ಪ್ರಬುದ್ಧರಾಗಿದ್ದೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>