ಸ್ಮೃತಿ ಮಂದಾನ ನಾಯಕತ್ವದ ಆರ್ಸಿಬಿ ಗುಂಪು ಹಂತದಲ್ಲಿ ಆಡಿರುವ ಏಳು ಪಂದ್ಯಗಲ್ಲಿ ಎರಡು ಜಯ ಹಾಗೂ ಐದು ಸೋಲುಗಳನ್ನು ಕಂಡಿದೆ. ಹೀಗಾಗಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಆದರೆ, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಂಬೈಗೆ ನೇರವಾಗಿ ಫೈನಲ್ ತಲುಪಲು ಇಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ಹಾಗಾಗಿ ಪಂದ್ಯ ಮಹತ್ವ ಪಡೆದುಕೊಂಡಿದೆ.