<p><strong>ಲಂಡನ್:</strong> ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ಅನುಭವಿ ಆಫ್ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಶ ನೀಡಬೇಕಿತ್ತು ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗರಾದ ಮ್ಯಾಥ್ಯೂ ಹೇಡನ್ ಹಾಗೂ ರಿಕಿ ಪಾಂಟಿಂಗ್ ಹೇಳಿದ್ದಾರೆ.</p>.<p>ಅಶ್ವಿನ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಅಗ್ರಸ್ಥಾನದಲ್ಲಿರುವ ಬೌಲರ್. 2021–23ನೇ ಸಾಲಿನ ಡಬ್ಲ್ಯುಟಿಸಿಯಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ್ದಾರೆ. ಆದರೂ ಅವರನ್ನು ಭಾರತ ತಂಡವು ಫೈನಲ್ನಲ್ಲಿ ಕಣಕ್ಕಿಳಿಸದಿರುವುದು ಈಗ ಬಹಳಷ್ಟು ಕ್ರಿಕೆಟಿಗರಿಂದ ಟೀಕೆಗೊಳಗಾಗಿದೆ.</p>.<p>’ಅಶ್ವಿನ್ ಪ್ರಮುಖ ಆಟಗಾರ. ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಕೆ ಮಾಡಿರುವ ಸಾಧಕ. ಅವರು ತಂಡದಲ್ಲಿದ್ದಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು‘ ಎಂದು ಹೇಡನ್ ಐಸಿಸಿ ವೆಬ್ಸೈಟ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.</p>.<p>’ಆಸ್ಟ್ರೇಲಿಯಾ ತಂಡದಲ್ಲಿ ಎಡಗೈ ಬ್ಯಾಟರ್ಗಳು ಇದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಆಫ್ಸ್ಪಿನ್ನರ್ ಅಶ್ವಿನ್ ಅವರಿದ್ದರೆ ತಂಡಕ್ಕೆ ಹೆಚ್ಚು ಅನುಕೂಲವಾಗುತ್ತಿತ್ತು. ಅವರನ್ನು ಕೈಬಿಟ್ಟಿರುವುದು ದೊಡ್ಡ ತಪ್ಪು‘ ಎಂದು ಆಸ್ಟ್ರೇಲಿಯಾ ತಂಡದ ಮಾಜಿನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.</p>.<p>’ಟಾಸ್ ಗೆದ್ದರೂ ಭಾರತವು ನಿರ್ಧಾರ ಕೈಗೊಳ್ಳುವಲ್ಲಿ ಸ್ವಲ್ಪ ಎಡವಿತು. ಆಸ್ಟ್ರೇಲಿಯಾ ತಂಡವು ಟೆಸ್ಟ್ಗಳಲ್ಲಿ ಯಾವಾಗಲೂ ಮೊದಲಿಗೆ ಬ್ಯಾಟಿಂಗ್ ಮಾಡುವುದನ್ನೇ ಇಷ್ಟಪಡುತ್ತದೆ. ಅದೇ ಅವರಿಗೆ ಸಿಕ್ಕಿತು. ಅದನ್ನು ಸದುಪಯೋಗಪಡಿಸಿಕೊಂಡರು‘ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್:</strong> ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ಅನುಭವಿ ಆಫ್ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಶ ನೀಡಬೇಕಿತ್ತು ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗರಾದ ಮ್ಯಾಥ್ಯೂ ಹೇಡನ್ ಹಾಗೂ ರಿಕಿ ಪಾಂಟಿಂಗ್ ಹೇಳಿದ್ದಾರೆ.</p>.<p>ಅಶ್ವಿನ್ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಅಗ್ರಸ್ಥಾನದಲ್ಲಿರುವ ಬೌಲರ್. 2021–23ನೇ ಸಾಲಿನ ಡಬ್ಲ್ಯುಟಿಸಿಯಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ್ದಾರೆ. ಆದರೂ ಅವರನ್ನು ಭಾರತ ತಂಡವು ಫೈನಲ್ನಲ್ಲಿ ಕಣಕ್ಕಿಳಿಸದಿರುವುದು ಈಗ ಬಹಳಷ್ಟು ಕ್ರಿಕೆಟಿಗರಿಂದ ಟೀಕೆಗೊಳಗಾಗಿದೆ.</p>.<p>’ಅಶ್ವಿನ್ ಪ್ರಮುಖ ಆಟಗಾರ. ಟೆಸ್ಟ್ ಚಾಂಪಿಯನ್ಷಿಪ್ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಕೆ ಮಾಡಿರುವ ಸಾಧಕ. ಅವರು ತಂಡದಲ್ಲಿದ್ದಿದ್ದರೆ ಹೆಚ್ಚು ಅನುಕೂಲವಾಗುತ್ತಿತ್ತು‘ ಎಂದು ಹೇಡನ್ ಐಸಿಸಿ ವೆಬ್ಸೈಟ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.</p>.<p>’ಆಸ್ಟ್ರೇಲಿಯಾ ತಂಡದಲ್ಲಿ ಎಡಗೈ ಬ್ಯಾಟರ್ಗಳು ಇದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಆಫ್ಸ್ಪಿನ್ನರ್ ಅಶ್ವಿನ್ ಅವರಿದ್ದರೆ ತಂಡಕ್ಕೆ ಹೆಚ್ಚು ಅನುಕೂಲವಾಗುತ್ತಿತ್ತು. ಅವರನ್ನು ಕೈಬಿಟ್ಟಿರುವುದು ದೊಡ್ಡ ತಪ್ಪು‘ ಎಂದು ಆಸ್ಟ್ರೇಲಿಯಾ ತಂಡದ ಮಾಜಿನಾಯಕ ರಿಕಿ ಪಾಂಟಿಂಗ್ ಹೇಳಿದ್ದಾರೆ.</p>.<p>’ಟಾಸ್ ಗೆದ್ದರೂ ಭಾರತವು ನಿರ್ಧಾರ ಕೈಗೊಳ್ಳುವಲ್ಲಿ ಸ್ವಲ್ಪ ಎಡವಿತು. ಆಸ್ಟ್ರೇಲಿಯಾ ತಂಡವು ಟೆಸ್ಟ್ಗಳಲ್ಲಿ ಯಾವಾಗಲೂ ಮೊದಲಿಗೆ ಬ್ಯಾಟಿಂಗ್ ಮಾಡುವುದನ್ನೇ ಇಷ್ಟಪಡುತ್ತದೆ. ಅದೇ ಅವರಿಗೆ ಸಿಕ್ಕಿತು. ಅದನ್ನು ಸದುಪಯೋಗಪಡಿಸಿಕೊಂಡರು‘ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>