ನವದೆಹಲಿ: ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿಗಳ ಪರಿಹಾರ ನಿಧಿ (ಪಿಎಂ ಕೇರ್ಸ್)ಗೆ ₹ 50 ಲಕ್ಷ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.
‘ಇಂತಹ ಕಠಿಣ ಸಮಯದಲ್ಲಿ ದೇಶದ ಪರವಾಗಿ ಎಲ್ಲರೂ ಒಂದಾಗಿ ನಿಲ್ಲಬೇಕು. ಆಗ ಎಂತಹುದೇ ದೊಡ್ಡ ಸಮಸ್ಯೆಯಿದ್ದರೂ ಎದುರಿಸಲು ಸಾಧ್ಯವಾಗುತ್ತದೆ’ ಎಂದು ಯುವಿ ಹೇಳಿದ್ದಾರೆ.